ಕಲಬುರಗಿ.ಮೇ.31:ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮ ಪಂಚಾಯಿತಿಯ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ಪ್ರಸ್ತುತ ಚಾಲ್ತಿಯಲ್ಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಆರೋಗ್ಯ ಅಮೃತ ಅಭಿಯಾನದಡಿ ಕೂಲಿ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕಾಮಗಾರಿ ಸ್ಥಳದಲ್ಲಿನ 234 ಮಹಿಳೆಯರು ಹಾಗೂ 58 ಜನ ಪುರುಷರು ಸೇರಿದಂತೆ ಒಟ್ಟು 292 ಜನ ಕೂಲಿಕಾರ್ಮಿಕರ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆ ಸೇರಿದಂತೆ ಮತ್ತಿತರ ಪರೀಕ್ಷೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕೂಲಿಕಾರರು ತಮ್ಮ ದೇಹದ ಆರೋಗ್ಯ ಸಂರಕ್ಷಣೆಯಲ್ಲಿ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳಲು ತಿಳಿಸಲಾಯಿತು.
ಕಲಬುರಗಿ ತಾಲೂಕು ಪಂಚಾಯತ್ನ ಐಈಸಿ ಸಂಯೋಜಕ ಮೋಸಿನ ಖಾನ್ ಸೇರಿದಂತೆ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.