ಮೈಸೂರು: ಜೂ.11:- ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತವರು ಜಿಲ್ಲೆ ಮೈಸೂರಿಗೆ ಪ್ರಥಮ ಬಾರಿಗೆ ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಲಾಗಿದೆ.
ಜಿಲ್ಲಾ ಗ್ರಾಮಾಂತರ ಮತ್ತು ನಗರ ಕಾಂಗ್ರೆಸ್ ಸಹಯೋಗದಲ್ಲಿ ಗುರುವಾರ ಕಾಂಗ್ರೆಸ್ ಭವನದಲ್ಲಿ ನಡೆದ ಸಿದ್ದರಾಮಯ್ಯ ಸ್ವಾಗತಿಸುವ ಪೂರ್ವಭಾವಿ ಸಭೆಯಲ್ಲಿ ಹಲವು ಮುಖಂಡರು ತಮ್ಮ ಅನಿಸಿಕೆ ಹಂಚಿಕೊಂಡರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ಕುಮಾರ್ ಮಾತನಾಡಿ, ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುತ್ತದೆ. ಈ ಕಾರ್ಯಕ್ಕೆ ಎಲ್ಲ ಸಹಕಾರ ನೀಡಬೇಕು ಎಂದು ಕೋರಿದರು.
ಸುತ್ತೂರು ಗ್ರಾಮದ ಹೊರ ವಲಯದಲ್ಲಿ ಹೆಲಿಪ್ಯಾಡ್ ಇಲ್ಲಿದೆ. ಅಲ್ಲಿಂದ ಗ್ರಾಮಕ್ಕೆ ಬರಲು 1 ಕಿ.ಮೀ. ಅಂತರ ಇದೆ. 40ರಿಂದ 50 ಸಾವಿರ ಸೇರಿಸಬಹುದು. ಅರ್ಧ ಕಿಮೀ ತೆರೆದ ಜೀಪಿನಲ್ಲಿ ಕರೆತರಲು ಚಿಂತನೆ ನಡೆಸಿದ್ದೇವೆ ಎಂದರು.
ಬ್ಲಾಕ್ ಅಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದುಕೊಂಡು ಬರಬೇಕು. ಕಲಾತಂಡಗಳ ವ್ಯವಸ್ಥೆ ಮಾಡಬೇಕು. ತವರಿಯಲ್ಲಿ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ದೊರೆಯಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಮಾತನಾಡಿ, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುವ ಮೂಲಕ ಹೊಸಯುಗ ಪ್ರಾರಂಭವಾಗಿದೆ. ನಾವೆಲ್ಲರೂ ಸಹಕಾರ ಕೊಟ್ಟರೆ ಉತ್ತಮವಾಗಿ ಆಡಳಿ ನೀಡಲು ಸಾಧ್ಯವಾಗುತ್ತದೆ. 2024ರ ಪಾರ್ಲಿಮೆಂಟ್ ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯೋನ್ಮುಖರಾಗಬೇಕಿದ ಎಂದು ತಿಳಿಸಿದರು.
ಮಾಜಿ ಶಾಸಕ ಬನ್ನೂರು ಕೃಷ್ಣಪ್ಪ ಮಾತನಾಡಿ, ಸಿದ್ದರಾಮಯ್ಯ ಅವರು 2ನೇ ಮುಖ್ಯಮಂತ್ರಿಯಾಗಿರುವುದು ಹೆಮ್ಮೆಯ ವಿಚಾರ. ಅವರನ್ನು ಆತ್ಮೀಯವಾಗಿ ಸ್ವಾಗತಿಸುವುದು ಆದ್ಯ ಕರ್ತವ್ಯ. ಅಲ್ಲದೇ, ಪಕ್ಷವನ್ನು ಅಧಿಕಾರಕ್ಕೆ ತರಲು ಕಷ್ಟಪಟ್ಟವರಿಗೆ ಅವಕಾಶ ಸಿಗಬೇಕು ಎಂದು ಆಶಿಸಿಸಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಸಿದ್ಧಶೆಟ್ಟಿ ಮಾತನಾಡಿ, ತಾಲೂಕು ಕೇಂದ್ರಗಳಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೂಚಿಸುತ್ತೇವೆ. ಜಿಲ್ಲಾ ಕಾಂಗ್ರೆಸ್ ಆದೇಶವನ್ನು ಪಾಲಿಸುತ್ತೇವೆ ಎಂದರು.
ನಗರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾಲತಾ ಚಿಕ್ಕಣ್ಣ ಮಾತನಾಡಿ, 5 ಗ್ಯಾರಂಟಿಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಸಿದ್ದರಾಮಯ್ಯ ಅವರ ಸ್ವಾಗತಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರನ್ನು ಸೇರಿಸಲಾಗುವುದು ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಪೆÇ್ರ.ರಾಮಪ್ಪ ಮಾತನಾಡಿ, ಮುಖ್ಯಮಂತ್ರಿಯಾದ ಬಳಿಕ ಮೈಸೂರಿಗೆ ಬರಲು ಸಿದ್ದರಾಮಯ್ಯ ಅವರಿಗೆ ಆಸೆಯಿತ್ತು. ದಾವಣಗೆರೆಯಲ್ಲಿ ತೀರ ಹತ್ತಿರದವರ ವಿವಾಹ ಇದ್ದರಿಂದ ಅಲ್ಲಿಗೆ ಭೇಟಿ ನೀಡಿದರು. 3 ಗಂಟೆಯಷ್ಟೇ ಅಲ್ಲಿದ್ದರು ಎಂದು ತಿಳಿಸಿದರು.
ಪಕ್ಷದ ಕಾರ್ಯಕರ್ತರು ಶ್ರಮದಿಂದ ಅಧಿಕಾರಕ್ಕೆ ಬಂದಿದೆ. ತಮ್ಮ ವೈಯಕ್ತಿಕ ಕೆಲಸಗಳನ್ನು ಬಿಟ್ಟು ಹಗಲು ರಾತ್ರಿ ದುಡಿದಿದ್ದಾರೆ. ಕೆಲಸ ಮಾಡಿದವರಿಗೆ ಕೂಲಿ ಕೊಡಬೇಕಾಗಿದೆ.
ಜುಲೈ ತಿಂಗಳ ಬಜೆಟ್ ಅಧಿವೇಶನದ ಬಳಿಕ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕವಾಗಲಿದೆ ಎಂದು ನುಡಿದರು.
ಮಾಜಿ ಶಾಸಕ ಬನ್ನೂರು ಕೃಷ್ಣಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಸಿದ್ಧಶೆಟ್ಟಿ, ನಗರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾಲತಾ ಚಿಕ್ಕಣ್ಣ, ಕೆಪಿಸಿಸಿ ಕಾರ್ಯದರ್ಶಿ ಪೆÇ್ರ.ರಾಮಪ್ಪ, ನಗರಾದ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ಕಾರ್ಯದರ್ಶಿ ಚಂದ್ರಮೌಳಿ ಮುಖಂಡರಾದ ಶಿವ ನಾಗಪ್ಪ, ಮಂಜುಳಾ ಮಾನಸ, ಕೂರ್ಗಳ್ಳಿ ಮಹದೇವ್, ಮಾಜಿ ಮೇಯರ್ ಚಿಕ್ಕಣ್ಣ, ಪೆÇ್ರ.ಶಿವಪ್ರಸಾದ್, ಶಿವಪ್ರಸಾದ್, ಸೇವಾದಳ ಮುಖಂಡ ಗಿರೀಶ್, ಕಾಂಗ್ರೆಸ್ ಮುಖಂಡ ಸುಂದರ, ಹರ್ಷ, ಈಶ್ವರ ಚಕ್ಕಡಿ, ಡಿ.ನಾಗಭೂಷಣ್, ಜವರೇಗೌಡ, ಎನ್.ಆರ್. ಕ್ಷೇತ್ರದ ಬ್ಲಾಕ್ ಅಧ್ಯಕ್ಷ ಮಂಜುನಾಥ್ ಮುಂತಾದವರಿದ್ದರು.