ಹೊಸಬರ “ನಿಮ್ಮೆಲ್ಲರ ಆರ್ಶೀರ್ವಾದ” ಚಿತ್ರ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಹಂತಕ್ಕೆ ಬಂದಿದೆ. ಯುವ ಸಿನಿ ಸಿನಿಮೋತ್ಸಾಹಿಗಳು ಸೇರಿಕೊಂಡು ತಯಾರಿಸಿರುವ ಚಿತ್ರಕ್ಕೆ ವರುಣ್ ಹೆಗ್ಡೆ ಬಂಡವಾಳ ಹೂಡಿದ್ದಾರೆ.
ಕರಾವಳಿಯ ವಿವಿಧ ಭಾಗಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ನಿಮ್ಮೆಲ್ಲರ ಆಶೀರ್ವಾದ ಚಿತ್ರ ಇದೇ ತಿಂಗಳು ರಾಜ್ಯಾದ್ಯಂತ ತೆರೆಗೆ ಬರಲಿದೆ. ಯುವ ನಿರ್ದೇಶಕ ರವಿಕಿರಣ್ ಆಕ್ಷನ್ ಕಟ್ ಹೇಳಿದ್ಧಾರೆ.
ಕೌಟುಂಬಿಕ ಕಥಾಹಂದರದ ನಿಮ್ಮೆಲ್ಲರ ಆಶೀರ್ವಾದ ಸಿನಿಮಾದಲ್ಲಿ ಪೆÇಲೀಸ್ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ.
ಈ ಚಿತ್ರದ ಮೂಲಕ ಪ್ರತೀಕ್ ಶೆಟ್ಟಿ ನಾಯಕನಾಗಿ ಸ್ಯಾಂಡಲ್ ವುಡ್ಗೆ ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ.ಎನ್.ಲಕ್ಷ್ಮೀದೇವಿ, ಅರವಿಂದ ಬೋಳಾರ್, ಗೋವಿಂದೇಗೌಡ, ಸ್ವಾತಿ ಗುರುದತ್, ದಿನೇಶ್ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.
ಸರವಣನ್ ಜಿ.ಎನ್.ಛಾಯಾಗ್ರಹಣ, ರಘು ನಿಡುವಳ್ಳಿ ಡೈಲಾಗ್, ರೂಪೇಂದ್ರ ಆಚಾರ್ ಕಲಾ ನಿರ್ದೇಶನ, ಸುನಾದ್ ಗೌತಮ್ ಸಂಗೀತ ಮತ್ತು ವಿವೇಕ್ ಚಕ್ರವರ್ತಿ ಹಿನ್ನೆಲೆ ಸಂಗೀತವಿದೆ.