
ಕಲಬುರಗಿ,ಮೇ 11: ಚಿಂಚೋಳಿ ತಾಲೂಕಿನ ಸಲಗರ್ ಬಸಂತಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಲಗರ್ ಕಾಲೋನಿ ತಾಂಡಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ವ್ಯಕ್ತಿಯನ್ನು ತಾಂಡಾ ನಿವಾಸಿ ರಾಮು ತಂದೆ ಪುರು ರಾಠೋಡ್ ಎಂದು ಗುರುತಿಸಲಾಗಿದೆ.
ಇವರು ಬುಧವಾರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪೆÇೀಲಿಂಗ್ ಏಜೆಂಟ್ ಆಗಿದ್ದರು ಎಂದು ಹೇಳಲಾಗುತ್ತಿದೆ.ರಾಮು ರಾಠೋಡ್ ಕುಟುಂಬದವರು ಕೊಲೆಯ ಶಂಕೆ ವ್ಯಕ್ತಪಡಿಸಿದ್ದಾರೆ.
ಇದು ಕೊಲೆಯೋ,ಆತ್ಮಹತ್ಯೆಯೋ ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.ಘಟನಾ ಸ್ಥಳಕ್ಕೆ ಚಿಂಚೋಳಿ ಸಿಪಿಐ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.