
ಬೆಂಗಳೂರು, ಸೆ.೬- ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದರು ಎಂಬ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆಗೆ ಕಿಡಿ ಕಾರಿರುವ ಬಿಜೆಪಿ
ಯಾರಿಗಾದರು ಅವರ ಮುತ್ತಾತ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ, ತಂದೆ ಇಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಅಷ್ಟೆ ಎಂದು ತಿರುಗೇಟು ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಗೃಹ ಸಚಿವ ಪರಮೇಶ್ವರ್ ಅವರ ಇಂಡಿಯಾ ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದಂತಿದೆ. ಹಾಗಾಗಿ ಅವರು ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂದೆಲ್ಲ ಹೇಳುತ್ತಿದ್ದಾರೆ. ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಹಾದಿಯೂ ಇಲ್ಲ, ಅಂತ್ಯವೂ ಇಲ್ಲ, ಇದೊಂದು ಸಹಸ್ರಾರು ವರ್ಷಗಳಿಂದ ನಡೆದು ಬಂದ ಬಹು ಉಪಾಸನ ವಿಧದ ಜೀವ ಪದ್ಧತಿ ಎಂಬ ಕಾರಣಕ್ಕೆ ಇದು ಸನಾತನ ಧರ್ಮ ಮತ್ತು ಭಾರತ ಸನಾತನ ಭೂಮಿ ಎಂದು ಟ್ವಿಟರ್ನಲ್ಲಿ ಬಿಜೆಪಿ ಹೇಳಿದೆ.
ಔರಂಗಜೇಬನಿಂದ ಹಿಡಿದು ಉದಯನಿಧಿ ಸ್ಟಾಲಿನ್ವರೆಗೂ ಅದೆಷ್ಟೋ ದಾಳಿಕೋರನ್ನು ಈ ಮಣ್ಣು ಕಂಡ
ಮೇಲೂ ತನ್ನ ಅಸ್ಥಿತ್ವ ಉಳಿಸಿಕೊಂಡಿದೆ. ಧರ್ಮ ಜಿಜ್ಞಾಸೆಗಿಂತಲೂ ಸದ್ಯಕ್ಕೆ ನಿಮ್ಮ ಪಕ್ಷದಲ್ಲಿ ನಿಮ್ಮ ಅಸ್ಥಿತ್ವ ಉಳಿಸಿಕೊಳ್ಳುವ ಕಡೆಗೆ ಹೆಚ್ಚಿನ ಗಮನ ನೀಡುವುದು ನಿಮ್ಮ ವೈಯಕ್ತಿಕ ಹಿತದ ದೃಷ್ಟಿಯಿಂದ ಒಳಿತು ಎಂದು ಬಿಜೆಪಿ ಡಾ. ಜಿ. ಪರಮೇಶ್ವರ್ರವರಿಗೆ ಟಾಂಗ್ ನೀಡಿದೆ.