ಪರಿಸರ ಕಾಳಜಿ ಚಿತ್ರ `ಜಲಪಾತ’

ನಟ ಪ್ರಮೋದ್ ಶೆಟ್ಟಿಗೆ “ವೈಶಂಪಾಯನ ತೀರ” ಚಿತ್ರ ನಿರ್ದೇಶನ ಮಾಡಿದ್ದ ರಮೇಶ್ ಬೇಗಾರ್ ಸದ್ಯ ಪರಿಸರ ಕಾಳಜಿ ಕುರಿತು” ಜಲಪಾತ”ಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಯಾಂತ್ರಿಕ ಯುಗದಲ್ಲಿ ಮಾನಸಿಕ ಒತ್ತಡ ಹೆಚ್ಚಿದ್ದು ಒತ್ತಡಕ್ಕೆ ಪರಿಹಾರ ನಿಸರ್ಗದಲ್ಲಿ ಮಾತ್ರ ಸಾಧ್ಯ. ಪ್ರಕೃತಿ, ಜನರ ಜೀವನ ಶೈಲಿ ಹಾಗೂ ಆಹಾರ ಕ್ರಮದ ಕುರಿತಾದ ಕಥೆಯೇ ಚಿತ್ರದ ತಿರುಳು.

40 ವರ್ಷಗಳ ಹಿಂದೆ ಭಾರತದ ಆಹಾರ ಪದ್ದತಿ ಜಗತ್ತಿನಲ್ಲಿಯೇ ಅತೀ ಹೆಚ್ಚು ಆರೋಗ್ಯಕರವಾಗಿತ್ತು, ಈಗ ಮಣ್ಣಿನಲ್ಲಿ ಸತ್ವ ಇಲ್ಲ, ಆಹಾರದಲ್ಲಿ ಕಲಬೆರಿಕೆ ಹಾಗೂ ರಾಸಾಯನಿಕ ವಸ್ತುಗಳ ವಿಪರೀತ ಬಳಕೆಯಿಂದ ಜನರಲ್ಲಿ ಸಮಸ್ಯೆಗಳು ಹೆಚ್ಚಿವೆ. ಹೀಗಾಗಿ ಪೂರ್ವಿಕರ ಜೀವನ ಶೈಲಿ ಹಾಗೂ ಆಹಾರ ಪದ್ದತಿ ಮತ್ತೆ ಮರುಕಳಿಸಬೇಕು ಎನ್ನುವ ಉದ್ದೇಶದಿಂದ ಚಿತ್ರ ನಿರ್ಮಾಣ ಮಾಡಿದ್ದಾರೆ.

ಚಿತ್ರಕ್ಕೆ ರವೀಂದ್ರ ತುಂಬರಮನೆ ಬಂಡವಾಳ ಹಾಕಿದ್ದು  ರಜನೀಶ್ ನಾಯಕ, ನಾಗಶ್ರೀ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನ ಟೆನ್ಶನ್ ಹಾಗೂ ಬ್ಯೂಸಿ ಬದುಕಿನ ಜಂಜಾಟದಲ್ಲಿದ್ದ ನೂರಾರು ಜನ ಮಧುವನಕ್ಕೆ ಭೇಟಿಕೊಟ್ಟು ಸಂಗೀತ ಹಾಗೂ ಆಟಗಳನ್ನಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಶೃಂಗೇರಿ ಸುತ್ತಮುತ್ತ 18 ದಿನಗಳ ಕಾಲ ಶೂಟಿಂಗ್ ನಡೆದಿದೆ. ಮಧುವನದ ವಸಂತೋತ್ಸವದಲ್ಲಿ ಚಿತ್ರೀಕರಣ ನಡೆಯುತ್ತಿದೆ. ನೈಸರ್ಗಿಕ ಹಾಗೂ ಸಾವಯವ ಕೃಷಿ ಬಗ್ಗೆ ಆಸಕ್ತಿ ಇರುವವರು ಮಧುವನಕ್ಕೆ ಭೇಟಿ ನೀಡಬಹುದು ಎನ್ನುತ್ತಾರೆ “ರವೀಂದ  ತುಂಬರಮನೆ”