ಪಾಕ್ ಅಪ್ರಚೋದಿತ ಗುಂಡಿನ ದಾಳಿ ಯೋಧ ಸೇರಿ ನಾಲ್ವರಿಗೆ ಗಾಯ

ಶ್ರೀನಗರ,ಅ.೨೭- ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಬಿಎಸ್‌ಎಫ್ ದಾಳಿಗೆ ಯೋಧ ಸೇರಿ ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ.ಜಮ್ಮು- ಕಾಶ್ಮೀರ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೇನೆ ಗುಂಡಿನ ದಾಳಿ ನಡೆಸಿದೆ. ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ ನಡೆದಿದೆ.ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಭಾರತೀಯ ಪೋಸ್ಟ್‌ಗಳ ಮೇಲೆ ನಿನ್ನೆ ರಾತ್ರಿ ೮ ರ ವೇಳೆ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಪಡೆಗಳು ಕೂಡ ಅದಕ್ಕೆ ಪ್ರತಿದಾಳಿ ನಡೆಸಿವೆ ಎಂದು ಬಿಎಸ್‌ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕುಪ್ವಾರಾ ಜಿಲ್ಲೆಯ ಎಲ್‌ಒಸಿಯಾದ್ಯಂತ ನುಸುಳಲು ಯತ್ನಿಸಿದ ಐವರು ಎಲ್‌ಇಟಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಕುಪ್ವಾರದ ಮಚಿಲ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯ ಕೆಲವೇ ಗಂಟೆಗಳ ನಂತರ ಅರ್ನಿಯಾ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘನೆಯಾಗಿದೆ. ಅರ್ನಿಯಾ ಮತ್ತು ಆರ್‌ಎಸ್ ಪುರ ಸೆಕ್ಟರ್‌ಗಳಲ್ಲಿ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ಭಾರತೀಯ ಪೋಸ್ಟ್‌ಗಳ ಮೇಲೆ ಪಾಕಿಸ್ತಾನ ರೇಂಜರ್‌ಗಳು ರಾತ್ರಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರಿಂದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು ಮತ್ತು ಒಬ್ಬರು ನಾಗರಿಕ ಗಾಯಗೊಂಡಿದ್ದಾರೆ. ಗುಂಡಿನ ದಾಳಿಯ ನಂತರ, ಆರ್‌ಎಸ್ ಪುರದ ಅರ್ನಿಯಾದಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ.