ಪ್ರಧಾನಿ ಮೋದಿಗೆ ಅಳೋದು ರೂಢಿ

ಕಲಬುರಗಿ,ಮೇ 3: ಬೆಳಗ್ಗೆಯಿಂದ ಸಂಜೆವರೆಗೆ ಅಳುತ್ತಲೇ ಇರುವುದು ಪ್ರಧಾನಿ ಮೋದಿ ಅವರಿಗೆ ರೂಢಿಯಾಗಿಬಿಟ್ಟಿದೆ. ಅವರೊಬ್ಬ ಕ್ರೈ ಬೇಬಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೇವಡಿ ಮಾಡಿದರು.
ಇಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 91 ಬಾರಿ ನನ್ನನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆ ಎನ್ನುವ ಮೋದಿ,ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಡಿರುವ ಹಗುರವಾದ ಮಾತುಗಳನ್ನುಮರೆತಿದ್ದಾರೆ. ಸೋನಿಯಾ ಗಾಂಧಿ ಅವರನ್ನು ವಿಡೋ (ವಿಧವೆ), ಇಟಲಿ ಗರ್ಲ್ ಎನ್ನುವ ಪದಬಳಸಿದ್ದರು. ರಾಹುಲ್‍ಗಾಂಧಿ ಒಬ್ಬ ಹೈಬ್ರಿಡ್ ಎಂದಿದ್ದರು. ಇಷ್ಟೆಲ್ಲಾ ಹಗುರವಾದ ಮಾತುಗಳನ್ನು ನಮ್ಮ ಪಕ್ಷದ ಹೈಕಮಾಂಡ್ ವಿರುದ್ಧ ಆಡಿದ್ದರೂ ನಾವ್ಯಾರೂಮೋದಿ ಅವರಂತೆ ಅಳುತ್ತಾ ಕುಳಿತಿಲ್ಲ. ಇದೊಂದು ವಾರ್ ಅನ್ನೋದು ನಮಗೆಗೊತ್ತು. ಬರೀ ಅಳುತ್ತಾ ಕುಳಿತುಕೊಂಡರೆ ಆಗಲ್ಲ ಎಂದು ಅವರು ಕುಟುಕಿದರು.
ತಾವೊಬ್ಬ ಹಿಂದುಳಿದ ವರ್ಗದ ವ್ಯಕ್ತಿ ಆಗಿರುವುದರಿಂದ ತಮ್ಮ ವಿರುದ್ಧ ಇಲ್ಲಸಲ್ಲದಟೀಕೆಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಮೋದಿ ಪದೇಪದೆ ಉಲ್ಲೇಖಿಸುತ್ತಾರೆ. ಆದರೆ, ಮೋದಿಯವರು ಒಂದು ಅಂಶವನ್ನು ನೆನಪಿಡಬೇಕು.ನಾನು ದಲಿತ. ಮೋದಿಗಿಂತಲೂ ಕೆಳಗೆ ಇದ್ದೇನೆ. ಮೊದಲು ನನ್ನ ತಲೆಯ ಮೇಲೆಕಾಲಿಟ್ಟ ಮೇಲೆಯೇ ನಿಮ್ಮ ಕಡೆಗೆ ಬರುತ್ತಾರೆ ಎಂದು ಸೂಚ್ಯವಾಗಿ ನುಡಿದರು.
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಕುರಿತು ಪ್ರಸ್ತಾಪಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ,ಒಂದುವೇಳೆ, ಕಾಂಗ್ರೆಸ್ ಸರಕಾರ ರಚನೆಗೊಂಡರೆ ಮೊದಲ ಸಂಪುಟಸಭೆಯಲ್ಲಿಯೇ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲಾಗುವುದು ಎಂದರು.ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಗೆ ವಾರಂಟಿಯೂ ಇಲ್ಲ; ಗ್ಯಾರಂಟಿಯೂ ಇಲ್ಲ ಎಂಬಪ್ರಧಾನಿ ಮೋದಿ ಟೀಕೆಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಎಂದಮೇಲೆ ಸಹಜವಾಗಿಯೇ ಟೀಕಿಸುತ್ತಾರೆ. ಈ ಹಿಂದೆ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿದ್ದ
ಎಲ್ಲ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ ಎಂದು ಉಲ್ಲೇಖಿಸಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗ ದಳ ಸಂಘಟನೆ ನಿಷೇಧಿಸುವ ಅಂಶದ ಕುರಿತುಪ್ರಸ್ತಾಪಿಸಿದ ಅವರು, ಪ್ರಣಾಳಿಕೆ ಸಮಿತಿಯ ಅಧ್ಯಕ್ಷರು ಈ ಬಗ್ಗೆ ಈಗಾಗಲೇಸ್ಪಷ್ಟೀಕರಣ ನೀಡಿದ್ದಾರೆ. ಕೆಲವರು ರಾತ್ರಿಯಲ್ಲಿ ನಾನ್ ವೆಜ್ ತಿಂದು ಹಗಲು ಹೊತ್ತಲ್ಲಿನಾನ್ ವೆಜ್ ತಿನ್ನುವವರನ್ನು ಬೈಯ್ದಾಡಿಕೊಂಡು ಓಡಾಡುತ್ತಾರೆ. ಒಟ್ಟಾರೆ, ಜನರಮಧ್ಯೆ ಜಗಳ ಹಚ್ಚಿ ಓಟು ಪಡೆಯುವ ಗಿಮಿಕ್ ಒಳ್ಳೆಯದಲ್ಲ ಎಂದು ಖರ್ಗೆ ಕಿವಿಮಾತು ಹೇಳಿದರು.


ಮೊದಲು ನಮ್ ಕೈಗೆ ಪ್ರಶ್ನೆಪತ್ರಿಕೆ ಕೊಡಿ
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ಅಂಶಗಳನ್ನುಅನುಷ್ಠಾನಕ್ಕೆ ತರಬೇಕಾದರೆ ಮೊದಲು ನಮ್ಮ ಸರಕಾರ ಅಧಿಕಾರಕ್ಕೆ ಬರಬೇಕು.ನಮ್ ಕೈಗೆ ಪ್ರಶ್ನೆ ಪತ್ರಿಕೆಯನ್ನೇ ನೀಡದೆ ಉತ್ತರ ಕೊಡಿ ಎಂದರೆ ಹೇಗೆ? ಎಂದುಪ್ರಶ್ನಿಸಿದ ಹಿರಿಯ ಮುತ್ಸದ್ಧಿ ಮಲ್ಲಿಕಾರ್ಜುನ ಖರ್ಗೆ, ಅಧಿಕಾರಕ್ಕೆ ಬಂದರೆ ಚುನಾವಣಾಪ್ರಣಾಳಿಕೆಯಲ್ಲಿರುವ ಎಲ್ಲ ಅಂಶಗಳನ್ನು ಖಂಡಿತ ಈಡೇರಿಸುವುದಾಗಿ ಸ್ಪಷ್ಟನೆ ನೀಡಿದರು.