ಪ್ರಸಕ್ತ ಸಾಲಿನಿಂದ ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಕಾರ್ಯಾರಂಭ

ಶಿವಮೊಗ್ಗ.ಮಾ.೧: ಕೋರಿಕೆಯಂತೆ ಅಹ್ಮದಾಬಾದ್ ನಂತರ ದೇಶದ ಎರಡನೇ ರಕ್ಷಾ ವಿಶ್ವವಿದ್ಯಾಲಯ ಶಿವಮೊಗ್ಗಕ್ಕೆ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಕಾರ್ಯಾರಂಭಗೊಳ್ಳಲಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.ಅವರು  ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿ, ವಿವಿ ಆರಂಭಿಸಲು ತಾತ್ಕಾಲಿಕವಾಗಿ ರಾಗಿಗುಡ್ಡದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಕಟ್ಟಡವನ್ನು ಗುರುತಿಸಲಾಗಿದೆ. ಶಾಶ್ವತ ಕಟ್ಟಡ ನಿರ್ಮಿಸಲು ಅಗತ್ಯವಿರುವ 8 ಎಕರೆ ನಿವೇಶನವನ್ನು ಶಿವಮೊಗ್ಗ ನಗರಕ್ಕೆ ಹೊಂದಿಕೊAಡAತಿರುವ ನವುಲೆಯ ಸರ್ವೇ ನಂ.112ರಲ್ಲಿ ಗುರುತಿಸಲಾಗಿದ್ದು, ಸ್ಥಳವನ್ನು ವಿಶ್ವವಿದ್ಯಾಲಯ ಮಂಜೂರಾತಿ ಪ್ರಾಧಿಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿ, ಒಪ್ಪಿಗೆ ಸೂಚಿಸಿದೆ ಎಂದ ಅವರು, ಜಿಲ್ಲಾಧಿಕಾರಿಗಳು ಭೂಮಿ ಮಂಜೂರಾತಿ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ ಕಾರ್ಯ ಹಂತಹAತವಾಗಿ ಆರಂಭಗೊಳ್ಳಲಿದೆ ಎಂದರು.ಆರಂಭದ ಹಂತದಲ್ಲಿ ಡಿಪ್ಲೋಮಾ ಇನ್ ಪೊಲೀಸ್ ಸೈನ್ಸ್, ಬೇಸಿಕ್ ಕೋರ್ಸ್ ಇನ್ ಕಾರ್ಪೊರೇಟ್ ಸೆಕ್ಯೂರಿಟಿ ಮ್ಯಾನೇಜ್‌ಮೆಂಟ್, ಡಿಪ್ಲೊಮಾ ಇನ್ ಕ್ರಿಮಿನಲ್ ಇನ್ವೆಸ್ಟಿಗೇಷನ್, ಪಿ.ಜಿ.ಡಿಪ್ಲೋಮಾ ಸೈಬರ್ ಸೆಕ್ಯೂರಿಟಿ ಅಂಡ್ ಸೈಬರ್ ಲಾ, ರೋಡ್ ಟ್ರಾಫಿಕ್ ಸೇಪ್ಟಿ ಮ್ಯಾನೇಜ್‌ಮೆಂಟ್, ದೈಹಿಕ ಸಾಮರ್ಥ್ಯಕ್ಕೆ ಸಂಬAಧಿಸಿದAತೆ ಎರಡು ವಾರಗಳ ಸರ್ಟಿಫಿಕೇಟ್ ಕೋರ್ಸ್, ಪೋಸ್ಟ್ ಗ್ರಾಜುಯೇಶನ್ ಡಿಪ್ಲೋಮಾ ಇನ್ ಕೋಸ್ಟಲ್ ಸೆಕ್ಯುರಿಟಿ ಅಂಡ್ ಲಾ ಎನ್‌ಫೋರ್ಸ್ಮೆಂಟ್ ಸೇರಿದಂತೆ ದೀರ್ಘಾವಧಿಯ ಹಾಗೂ ಅಲ್ಪಾವಧಿಯ ತರಗತಿಗಳು ನಡೆಯಲಿವೆ ಎಂದರು.ಪಿ.ಯು.ಸಿ. ವಿದ್ಯಾರ್ಹತೆ ಹೊಂದಿದ್ದು, ಉನ್ನತ ಶ್ರೇಣಯಲ್ಲಿ ಉತ್ತೀರ್ಣರಾಗಿರುವ ಹಾಗೂ ನಿಗಧಿಪಡಿಸಿದ ನಿಬಂಧನೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳನ್ನು ಡಿಪ್ಲೋಮಾ ಮತ್ತು ಪದವಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಂತೆಯೇ ಪದವಿ ವಿದ್ಯಾರ್ಥಿಗಳನ್ನು ಸ್ನಾತಕೋತ್ತರ ಪದವಿಗೆ ಆಯ್ಕೆ ಮಾಡಿಕೊಳ್ಳಲಾಗುವುದು ಎಂದ ಅವರು ಇಲ್ಲಿನ ವಿದ್ಯಾರ್ಥಿಗಳು ಕೇವಲ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿವಿಧ ವಿಷಯಗಳಲ್ಲಿ ಅಧ್ಯಯನ ಮಾಡುತ್ತಿರುವವರಿಗೆ ಬೇರೋಂದು ಹಾಗೂ ಉದ್ಯೋಗದ ಭದ್ರತೆ ಒದಗಿಸುವ ವಿಷಯವೊಂದು ಪರಿಚಯಿಸಿದಂತಾಗಲಿದೆ. ಈ ತರಬೇತಿಯಿಂದಾಗಿ ದೇಶದ ಸೈನಿಕ ಸೇವೆಗೆ, ದೇಶದ ಆಂತರಿಕ ಭದ್ರತಾ ವಿಭಾಗದಲ್ಲಿ ಸೇವೆ ಸಲ್ಲಿಸಲಿಚ್ಚಿಸುವವರಿಗೆ ಈ ತರಬೇತಿ ಸಹಕಾರಿಯಾಗಲಿದೆ ಮಾತ್ರವಲ್ಲ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಹೊಸದಿಕ್ಕನ್ನು ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.