ಔರಾದ : ಸೆ.20:ಪಟ್ಟಣದ ಹೃದಯ ಭಾಗದಲ್ಲಿರುವ ಅಮರೇಶ್ವರ ಮಂದಿರದ ಹಿಂಭಾಗದ ರುದ್ರಭೂಮಿಯಲ್ಲಿ ಬಟ್ಟೆ ವ್ಯಾಪಾರಿಯ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲೂಕಿನ ಬೋರಾಳ ಗ್ರಾಮದ ಬಾಬುರಾವ ಪಾಂಡ್ರೆ (54) ಮೃತ ವ್ಯಕ್ತಿ. ತನ್ನ ಬಟ್ಟೆ ಅಂಗಡಿಯಲ್ಲಿ ತಂಗುತಿದ್ದ ಬೆಳಿಗ್ಗೆ ರುದ್ರ ಭೂಮಿಯಲ್ಲಿ ಶೌಚಾಲಯಕ್ಕೆ ಹೋಗಿರುವ ರೀತಿ ಕಂಡು ಬಂದಿದೆ. ಮೃತ ವ್ಯಕ್ತಿಯ ಗುಪ್ತಾಂಗ, ಕೈ ಬೆರಳು, ಮೂಗು ಕತ್ತರಿಸಿರುವ ರೀತಿಯಲ್ಲಿ ಕಂಡು ಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ರಘುವೀರಸಿಂಗ್ ಠಾಕೂರ್ ಭೇಟಿ ಪರಿಶೀಲಿಸಿದರು. ಮೃತ ದೇಹನ್ನು ಬೀದರನ ಬ್ರೀಮ್ಸ್ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ವೇಳೆ ಎಎಸ್ಪಿ ಮಹೇಶ ಮೇಘಣ್ಣನವರ್ ಮೃತದೇಹವನ್ನು ಪರಿಶೀಲಿಸಿದರು. ಸಾವಿನ ಬಗ್ಗೆ ಎಲ್ಲ ರೀತಿಯಿಂದ ತನಿಖೆ ನಡೆಸಲಾಗುತ್ತದೆ ಎಂದು ಪೆÇಲೀಸರು ಕುಟುಂಬದ ಸದಸ್ಯರಿಗೆ ಭರವಸೆ ನೀಡಿದ್ದಾರೆ. ಈ ಕುರಿತು ಔರಾದ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.