ಬಳ್ಳಾರಿಯ ಎರಡು ಸಂಸ್ಥೆಗಳ ಬೆಳವಣಿಗೆಗೆಕಾಕರ್ಲತೋಟ ತಿಮ್ಮಪ್ಪರ ಕೊಡುಗೆ ಆಪಾರ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.23:  ಬಳ್ಳಾರಿ ರಾಘವ ಕಲಾಮಂದಿರದಲ್ಲಿ, ನಿನ್ನೆ ಸಂಜೆ ರಾಘವ ಮೆಮೋರಿಯಲ್ ಅಸೋಸಿಯೇಷನ್, ವತಿಯಿಂದ ಹಮ್ಮಿ ಕೊಂಡಿದ್ದ ಸಂಸ್ಥೆಯ ಅಮೃತ ಮಹೋತ್ಸವ ಪ್ರಯುಕ್ತ ಕಾಕರ್ಲತೋಟ ಕನುಗೋಲು ತಿಮ್ಮಪ್ಪ ರವರ 23ನೇ ವಾರ್ಷಿಕ  ಪುಣ್ಯ ತಿಥಿ ಕಾರ್ಯಕ್ರಮವನ್ನು ಸಂಸ್ಥೆಯ ಪದಾಧಿಕಾರಿಗಳು ಮತ್ತು ಕನುಗೋಲು ತಿಮ್ಮಪ್ಪ ರವರ ಕುಟುಂಬದವರು ಸೇರಿ ಜ್ಯೋತಿ ಬೆಳಗಿಸಿ, ಪುಷ್ಪಾಂಜಲಿ ಅರ್ಪಿಸುವ ಮೂಲಕ ಉದ್ಘಾಟಿಸಿದರು. ಕಾಕರ್ಲತೋಟ ಕನುಗೋಲು ತಿಮ್ಮಪ್ಪರವರ 23ನೇ ವಾರ್ಷಿಕ ಪುಣ್ಯ ತಿಥಿ ಕಾರ್ಯಕ್ರಮದ ನಿಮಿತ್ತ ನಿವೃತ್ತ ಉಪನ್ಯಾಸಕರು ಹಾಗೂ ಸಂಸ್ಥೆಯ ಕಾರ್ಯಕಾರಿಣಿ ಸದಸ್ಯರಾದ ಎನ್.ಬಸವರಾಜ್ ರವರು ಮಾತನಾಡುತ್ತಾ ಬಳ್ಳಾರಿಯ ಕಾಕರ್ಲತೋಟ ಗ್ರಾಮದಲ್ಲಿ 07 ,05,1903 ರರಲ್ಲಿ ದೊಡ್ಡ ವೀರಪ್ಪ ರವರ ಮಗನಾಗಿ ಜನಿಸಿದರು.ಮುಂದೆ ಬೆಳೆದು ವ್ಯಾಪಾರವನ್ನು ಪ್ರಾರಂಭಿಸಿ ಉತ್ತಮ ವ್ಯಾಪಾರಿಗಳೆನಿಸಿದರು.1955 ರಲ್ಲಿ ಬಳ್ಳಾರಿ ಮುನ್ಸಿಪಾಲಿಟಿ ಚುನಾವಣೆಯಲ್ಲಿ ಗೆದ್ದು ಕೌನ್ಸಿಲರ್ ಆಗಿ ನಗರಕ್ಕೆ ಸೇವೆ ಸಲ್ಲಿಸಿದರು. 1962/69ರ ಮದ್ಯದಲ್ಲಿ ಕಂಪ್ಲಿ ಸಕ್ಕರೆ ಕಾರ್ಖಾನೆಗೆ ಹಾಗೂ ಬಳ್ಳಾರಿ ಜನತಾ ಬಜಾರ್ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದರು.1979ರಿಂದ ರಾಜಕೀಯದಲ್ಲಿ ಬೆಳೆದು ಜನತಾ ಪಕ್ಷದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದರು.1971ರಿಂದ 2000 ವರೆಗೆ ಬಳ್ಳಾರಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ರಾಗಿ ಎಲ್ಲರ ಸಹಕಾರದಿಂದ ಸಂಸ್ಥೆಗೆ ನೂತನ ಕಟ್ಟಡ ನಿರ್ಮಿಸಿದರು.  ಹಾಗೆಯೇ1981 ರಿಂದ 2000ರದ ವರೆಗೆ ರಾಘವ ಮೆಮೋರಿಯಲ್ ಅಸೋಸಿಯೇಷನ್ ಅಧ್ಯಕ್ಷ ರಾಗಿ ಸ್ವಂತ ಕಲಾಕಾರರಾಗಿ ಕನ್ನಡ ಹಾಗೂ ತೆಲುಗು ನಾಟಕ ಗಳನ್ನು ಪ್ರೋತ್ಸಾಹಿಸಿ ಉತ್ತಮ ಕಲಾವಿದರನ್ನು ಸನ್ಮಾನಿಸಿ ಗೌರವಿಸಿದರು.   1980/81ರಲ್ಲಿ ಬಳ್ಳಾರಿ ರಾಘವರ ಶತ ಜಯಂತಿ ಉತ್ಸವನ್ನು ವಿಜೃಂಭಣೆಯಿಂದ ಆಚರಿಸಿದರು.ಉಕ್ಕಿನ ಮನುಷ್ಯ ನೆಂದು ಖ್ಯಾತ ರಾಗಿ ಸದಾ ಸನ್ಮಾರ್ಗದಲ್ಲಿ ನಡೆದು ಇತರರಿಗೂ ಮಾರ್ಗದರ್ಶಕರಾಗಿ ಬಾಳಿ 22/05/2000  ದಲ್ಲಿ ಸ್ವರ್ಗಸ್ಥರಾದರುಬಳ್ಳಾರಿಯ ಎರಡೂ ಸಂಸ್ಥೆಗಳಿಗೆ .ಅವರ ಕೊಡುಗೆ ಅಪಾರವಾಗಿದೆ ಎಂದರು. ರಂಗ ನಿರ್ದೇಶಕ ಅಣ್ಣಾಜಿ ಕೃಷ್ಣಾರೆಡ್ಡಿ ಪ್ರಾರ್ಥನೆ ಯಿಂದ ಪ್ರಾರಂಭ ವಾಯಿತು. ಸಂಸ್ಥೆಯ  ಗೌರವಾಧ್ಯಕ್ಷ ಶ್ರೀ ಕೆ ಚನ್ನಪ್ಪ ರವರು ಮತ್ತು ಜಂಟಿ ಕಾರ್ಯದರ್ಶಿ ಎಂ ರಾಮಾಂಜನೇಯಲು ಕನುಗೋಲು ತಿಮ್ಮಪ್ಪ ರವರ ಸಾದನೆಗಳನ್ನು ಸ್ಮರಿಸಿದರು. ನಿರೂಪಣೆಯನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ಎನ್ ಪ್ರಕಾಶ್ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಕೆ ಚನ್ನಪ್ಪ, ಅಧ್ಯಕ್ಷರಾದ ಕೆ ಕೋಟೆಶ್ವರ ರಾವ್,ಉಪಾಧ್ಯಕ್ಷರಳಾದ ಹೆಚ್ ವಿಷ್ಣುವರ್ಧನ್ ರೆಡ್ಡಿ, ರಮೇಶ್ ಗೌಡ ಪಾಟೀಲ್, ಕೆ.ರಾಮಾಂಜನೇಯಲು, ಕೆ ಕೃಷ್ಣ,ಟಿ.ಜಿ.ವಿಠಲ್,ಜಿ ಪ್ರಭಾಕರ,ಗಾದೆಂ ಗೋಪಾಲಕೃಷ್ಣ, ಕೆ ಶ್ಯಾಮ ಸುಂದರ್,ಕೆ ಪೊಂಪನ ಗೌಡ, ಡಾಕ್ಟರ್ ರಮೇಶ್ ಗೋಪಾಲ, ಕನುಗೋಲು ಅನಿಲ್ ಬಾಬು, ಕೆ ಸುರೇಂದ್ರ ಬಾಬು, ಶೇಷ ರೆಡ್ಡಿ, ವಿ ರಾಮಚಂದ್ರ,ಎಂ ರಮೇಶ್ ಬಾಬು, ರಮಣಪ್ಪ ಭಜಂತ್ರಿ ಮತ್ತು ಕನುಗೋಲು ತಿಮ್ಮಪ್ಪ ರವರ ಕುಟುಂಬದವರು,ಕಲಾವಿದರು ಭಾಗವಹಿಸಿದ್ದರು.ನಂತರ ರಂಗ ಸಂಸ್ಕೃತಿ ಬಳ್ಳಾರಿ ಇವರಿಂದ  ಬೊಕ್ಕಾ ಶ್ರೀನಿವಾಸ ರಾವ್ ರಚನೆಯಲ್ಲಿ  ಲಾಲ್ ರೆಡ್ಡಿ ನಿರ್ದೇಶನದಲ್ಲಿ  ಪಂಪಕಾಲು ತೆಲುಗು ಸಾಮಾಜಿಕ  ನಾಟಕ ಪ್ರದರ್ಶನ ಗೊಂಡು ಪ್ರೇಕ್ಷಕರ ಮನ ಸೂರೆ ಗೊಂಡಿತು.

One attachment • Scanned by Gmail