
ಅಥಣಿ : ಆ.12:ಬಸವಣ್ಣನವರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾ ಪುರುಷರು. ಜಿಡ್ಡು ಗಟ್ಟಿದ ಸಮಾಜವನ್ನು ನಿಷ್ಕ್ರಿಯಗೊಳಿಸಿ ಮಾನವೀಯತೆಯುಳ್ಳ ಹೊಸ ಸಮಾಜ ನಿರ್ಮಾಣ ಹಾಗೂ ಸಮಾನತೆಗೆ ಪ್ರಯತ್ನಿಸಿದ್ದಾರೆ ಎಂದು ಸಿ ಎಂ ಸಿದ್ದರಾಮಯ್ಯ ಅವರು ಹೇಳಿದರು,
ಅವರು ಅಥಣಿ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿ, ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿ, ನಾವೆಲ್ಲರೂ ನುಡಿದಂತೆ ನಡೆಯಬೇಕು ಎಂಬ ವಿಚಾರವನ್ನು ಬಸವಾದಿ ಶರಣರು ನಮ್ಮ ಸಮಾಜಕ್ಕೆ ನೀಡಿದರು. ಆ
ವಿಚಾರದಲ್ಲಿ ನಂಬಿಕೆಯಿರುವ ನಮ್ಮ ಸರ್ಕಾರ
ನುಡಿದಂತೆ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ,
ನಮ್ಮ ಸರ್ಕಾರದಿಂದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನ ಜಾರಿಗೊಳಿಸಲಾಗಿದೆ, ಗೃಹಲಕ್ಷ್ಮಿ ಯೋಜನೆಯನ್ನು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಚಾಲನೆ
ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಸುಮಾರು 36 ಸಾವಿರ ಕೋಟಿ ರೂ, ವೆಚ್ಚವಾಗಲಿದೆ,
ಈ ವೇಳೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಲಕ್ಷ್ಮಣ ಸವದಿ ಕಾಗವಾಡ ಶಾಸಕ ರಾಜು ಕಾಗೆ, ಸೇರಿದಂತೆ ಹಲವರು ಉಪಸ್ಥಿತರಿದ್ದರು,