ದಾವಣಗೆರೆ.ಜೂ.೧; ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ವಾರ್ಡಿನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುಲಾಬಿ ಹೂ ನೀಡುವ ಮೂಲಕ ಈ ಸಾಲಿನ ಶಾಲಾ ಪ್ರಾರಂಭೋತ್ಸವದ ಮೊದಲ ದಿನ ಭವ್ಯ ಸ್ವಾಗತ ಕೊರಲಾಯಿತು.ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೆ.ಎಲ್. ಹರೀಶ್ ಬಸಾಪುರ ಮಕ್ಕಳಿಗೆ ಪೆನ್ಸಿಲ್ ಹಾಗೂ ಚಾಕ್ಲೇಟ್ ನೀಡುವ ಮೂಲಕ ಶುಭಾಶಯ ತಿಳಿಸಿ ಈ ವಾರ್ಷಿಕ ವರ್ಷದಲ್ಲಿ ಶೇಕಡ ನೂರರಷ್ಟು ಹಾಜರಾತಿ ಪಡೆಯುವ ಮಕ್ಕಳಿಗೆ ವಿಶೇಷ ಬಹುಮಾನ ನೀಡುವುದಾಗಿ ತಿಳಿಸಿದರು, ಎಂ.ಎಸ್ ಕೊಟ್ರಯ್ಯ ಶಾಲಾ ಮುಖ್ಯ ಉಪಾಧ್ಯಾಯರಾದ ಸೋಮಶೇಖರಪ್ಪ, ಶಿಕ್ಷಕ, ಶಿಕ್ಷಕಿಯರು ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.