
ವಿಜಯಪುರ,ಮೇ ೨: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಬಸ್ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಹಳ್ಳೂರು ಕ್ರಾಸ್ನಲ್ಲಿ ಇಂದು ಸಂಭವಿಸಿದೆ. ಬಸ್ನ ಎಕ್ಸಲ್ ತುಂಡಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ನಲ್ಲಿದ್ದ ೧೫ಕ್ಕೂ ಅಧಿಕ ಜನರಿಗೆ ಗಾಯ ಆಗಿದೆ. ಬಸ್ನಲ್ಲಿ ೪೦ಕ್ಕೂ ಅಧಿಕ ಚುನಾವಣಾ ಸಿಬ್ಬಂದಿಗಳಿದ್ದರು. ಗಾಯಾಳುಗಳನ್ನ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದು ಗಾಯಾಳುಗಳ ನೆರವಿಗೆ ಮುದ್ದೇಬಿಹಾಳ ಚುನಾವಣಾಧಿಕಾರಿ ಚಂದ್ರಕಾಂತ ಪವಾರ್ ಧಾವಿಸಿದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರ ತರಬೇತಿಗೆ ಸಿಬ್ಬಂದಿಗಳನ್ನು ಕರೆದೊಯ್ಯಲಾಗುತ್ತಿತ್ತು. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.