
ಚಾಮರಾಜನಗರ, ಫೆ.28:- ಬಿಜೆಪಿಗೆ ನಿಜಕ್ಕೂ ಗೆಲ್ಲುವ ಧೈರ್ಯ ಇದ್ದಿದ್ದರೇ ಮೋದಿ ಮತ್ತು ಅಮಿತ್ ಶಾ ಯಾಕೆ ಇಷ್ಟು ಬಾರಿ ರಾಜ್ಯಕ್ಕೆ ಬರುತ್ತಿದ್ದಾರೆ?” ಎಂದು ಕಾಂಗ್ರೆಸ್ ಶಾಸಕ ಸಿ ಪುಟ್ಟರಂಗ ಶೆಟ್ಟಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಚಾಮರಾಜನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದಅವರು, ಮೋದಿ, ಅಮಿತಾ ಶಾ ರಾಜ್ಯಕ್ಕೆ ಇಷ್ಟು ಬಾರಿ ಬರ್ತಾ ಇದ್ದಾರಲ್ಲ. ಅದೇರಾಜ್ಯ ಮಳೆಯಿಂದ ಮುಳುಗಿದಾಗ ಅವರುಯಾಕೆ ಬರಲಿಲ್ಲ? ಕೊರೊನಾಅವಾಂತರದಲ್ಲಿ ಏಕೆ ಬರಲಿಲ್ಲ? ವಿಶೇಷಅನುದಾನ ಏಕೆ ಕೊಡಲಿಲ್ಲ? ಬಿಜೆಪಿಗೆ ಗೆಲ್ಲುವ ಧೈರ್ಯ ಇದ್ದಿದ್ದರೇ ಮೋದಿ ದೆಹಲಿಯಲ್ಲಿಯೇ ಕುಳಿತು ಕೈ ಅಲ್ಲಾಡಿಸಬೇಕಿತ್ತು ಎಂದು ವ್ಯಂಗ್ಯವಾಡಿದರು.
ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ವಿದಾಯ ಬಿಜೆಪಿಗೆ ಹಿನ್ನಡೆಯಾಗಲಿದೆ. ರಥಯಾತ್ರೆಯಿಂದ ಯಾವುದೇ ಪ್ರಯೋಜನವಿಲ್ಲ, ಜನರು ಅವರನ್ನು ಬೈದು ಕಳುಹಿಸುತ್ತಾರೆ. ಬಿಜೆಪಿ ಕೊಡುಗೆರಾಜ್ಯಕ್ಕೆ ಏನೇನು ಇಲ್ಲಾ. ಬಿಜೆಪಿಯೇ ಭರವಸೆಎಂದು ಗೋಡೆಗಳಲ್ಲಿ ಬರೆದು ಕೊಂಡಿದ್ದಾರμÉ್ಟೀ. 100 ಕ್ಕೆ 100 ರಷ್ಟು ಸುಳ್ಳು ಹೇಳುವ ಸರ್ಕಾರ ಇದ್ದರೇ ಅದು ಬಿಜೆಪಿ ಮಾತ್ರ, ಒಂದಾದರೂ ಸತ್ಯ ಹೇಳಲಿ ನೋಡೋಣ. ಸಿದ್ದರಾಮಯ್ಯ ಅವಧಿಯಲ್ಲμÉ್ಟೀ ಚಾಮರಾಜನಗರ ಅಭಿವೃದ್ಧಿಯಾಗಿದ್ದು, ಬಿಜೆಪಿ ಸರ್ಕಾರ ಯಾವುದೇ ಅನುದಾನಕೊಟ್ಟಿಲ್ಲ’ ಎಂದು ಕಿಡಿಕಾರಿದರು.
ಕಳೆದ 5 ವರ್ಷಗಳಲ್ಲಿ ಸಿದ್ದರಾಮಯ್ಯ ಆರಂಭಿಸಿದ್ದ ಯೋಜನೆಗಳಿಗೆ ಮುಂದುವರಿಕೆ ಭಾಗವಾಗಿ ಹಣಕೊಟ್ಟಿದ್ದಾರೆಯೇ ಹೊರತು ಹೊಸ ಅನುದಾನಯಾವುದು ಬಂದಿಲ್ಲ. ಅನುದಾನಕೊಡುವುದಾಗಿ ಚಾಮರಾಜನಗರದಲ್ಲಿ ಹೇಳಿದ ಸಿಎಂ ಬೆಂಗಳೂರಿಗೆ ಹೋಗಿ ರಿಜೆಕ್ಟ್ ಮಾಡಿದ್ದಾರೆ’ ಎಂದು ಆರೋಪಿಸಿದರು.