ಬಿಜೆಪಿ ಸರ್ಕಾರದ ರೈತ ಪರ ಯೋಜನೆಗಳನ್ನು ಕಾಂಗ್ರೆಸ್ ರದ್ದು ಪಡಿಸಿದರೆ ಪ್ರತಿಭಟನೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಜು.13:- ಬಿಜೆಪಿ ಸರ್ಕಾರದ ರೈತ ಪರ ಯೋಜನೆಗಳನ್ನು ಕಾಂಗ್ರೆಸ್ ರದ್ದು ಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಎಸ್.ಎಂ. ಮಲ್ಲಿಕಾರ್ಜುನ ಎಚ್ಚರಿಸಿದರು.
ನಗರದಜಿಲ್ಲಾಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ರೈತಪರ ಯೋಜನೆಗಳಾದ ಎಪಿಎಂಸಿ ಕಾನೂನು ರದ್ದು, ವಿದ್ಯುತ್‍ದರಏರಿಕೆ, ರೈತ ವಿದ್ಯಾನಿಧಿ ಯೋಜನೆರದ್ದು, ಜಿಲ್ಲೆಗೊಂದು ಗೋಶಾಲೆ ಯೋಜನೆರದ್ದು, ಭೂಸಿರಿ ಯೋಜನೆ ರದ್ದು, ಕಿಸಾನ್ ಸಮ್ಮಾನ್ ನಿಧಿಯೋಜನೆ ರದ್ದು, ರೈತ ಶಕ್ತಿ ಯೋಜನೆರದ್ದು, ನೀರಾವರಿ ಯೋಜನೆರದ್ದು, ನೀರಾವರಿ ಯೋಜನೆಗಳ ಕೃಷಿ ಭೂಮಿ ಮಾರಾಟಕಾಯ್ದೆ ರದ್ದು ಸೇರಿದಂತೆ ಇನ್ನೂ ಹಲವು ಯೋಜನೆಗಳನ್ನು ರದ್ದು ಮಾಡಲು ಕಾಂಗ್ರೆಸ್ ಪಕ್ಷ ಮುಂದಾಗಿರುವುದನ್ನು ಖಂಡನೀಯವಾಗಿದೆ ಎಂದರು.
ಬಿಜೆಪಿ ಸರ್ಕಾರದ ಅನೇಕ ಜನಪರ ಯೋಜನೆಗಳು ಇಂದಿಗೂ ಜನರಿಗೆ ಅನುಕೂಲವಾಗಲಿದೆ ಅದರೆ ಕಾಂಗ್ರೆಸ್ ಸರ್ಕಾರ ರದ್ದು ಮಾಡುವ ಅನೇಕ ಯೋಜನೆಗಳಿಂದ ಜನರಿಗೆ ಅನ್ಯಾಯವಾಗಲಿದೆ. ಇದರ ವಿರುದ್ದ ಬೀದಿಗಿಳಿದು ಹೋರಾಟ ಮಾಡುವುದಾಗಿ ಮಲ್ಲಿಕಾರ್ಜುನ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮೋರ್ಚಾದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಸುಂದ್ರಪ್ಪ, ಕೃಷ್ಣಶೆಟ್ಟಿ ಶ್ಯಾಡ್ರಳ್ಳಿ, ನಾಗರಾಜಪ್ಪ, ತಾಲೂಕು ಅಧ್ಯಕ್ಷ ಕೃಷ್ಣಶೆಟ್ಟಿ ಹಾಜರಿದ್ದರು.