
ಬಳ್ಳಾರಿ ಡಿ 24 : ಜಿಲ್ಲೆಯ ಹೊಸಪೇಟೆ ನಗರದಲ್ಲಿ ಪ್ರಧಾನಕಚೇರಿ ಹೊಂದಿರುವ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿಯ ಮಂಡಳಿಯ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟುರುವ ಅರಣ್ಯ ಸಚಿವ ಆನಂದ್ ಸಿಂಗ್ ಇಂದು ಖಾಲಿ ಇದ್ದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ತಾಲೂಕು ಕೃಷಿ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳ ಮತ ಕ್ಷೇತ್ರದ ಸದಸ್ಯರ ಅಕಾಲಿಕಮರಣದಿಂದ ಈಕ್ಷೇತ್ರ ಖಾಲಿ ಇತ್ತು.
ಈ ಸ್ಥಾನಕ್ಕೆ ಈಗ ಚುನಾವಣೆ ಘೋಷಣೆ ಆಗಿರುವುದರಿಂದ ಸಚಿವ ಆನಂದ ಸಿಂಗ್ ಅವರು ಸ್ಪರ್ಧೆ ಮಾಡಿದ್ದಾರೆ.
ಬಹುತೇಖ ಅವಿರೋಧ ಆಯ್ಕೆ ನಡೆಯಲಿದೆ. ಅಗತ್ಯ ಬಿದ್ದರೆ ಡಿ.30 ರಂದು ಚುನಾವಣೆ ನಡೆದು ಅಂತಿಮ ಫಲಿತಾಂಶ ಬರಲಿದೆ.
ಸಚಿವರಿಂದ ನಾಮಪತ್ರವನ್ನು ಸ್ವೀಕರಿಸಿ ಮಾತನಾಡಿದ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಮಹಾಂತೇಶ್ ಮಠದ ಅವರು, ಹಗರಿಬೊಮ್ಮನಹಳ್ಳಿಯಲ್ಲಿ ಸಹಕಾರ ಕ್ಷೇತ್ರದ ಒಂದು ಸ್ಥಾನ ಖಾಲಿಯಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿದೆ. ಸಚಿವ ಆನಂದ ಸಿಂಗ್ ಅವರು ಆ ಕ್ಷೇತ್ರಕ್ಕೆ ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ