ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಲು ಒತ್ತಾಯ; ಸರ್ಕಾರಕ್ಕೆ ಮನವಿ

ದಾವಣಗರೆ.ಜೂ.೧೩; ರಾಜ್ಯ ಸರ್ಕಾರ ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ ವೇತನವನ್ನು ಆರು ಸಾವಿರ ರೂಪಾಯಿಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಬಿಸಿಯೂಟ ತಯಾರಕರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ವೇಳೆ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿಕರ್ನಾಟಕ ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರಿಗೆ 2023 ಜುಲೈ ತಿಂಗಳನಲ್ಲಿ ಮಂಡಿಸುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು ಬಿಸಿಯೂಟ ತಯಾರಕರಿಗೆ  ವೇತನವನ್ನು ಆರು ಸಾವಿರ ರೂಪಾಯಿಗಳಿಗೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು.2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭಲ್ಲಿ, ಎಐಟಿಯುಸಿ ನಾಯಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರಾದ ಪ್ರಿಯಾಂಕ ಗಾಂಧಿಯವರು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಚರ್ಚಿಸಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ ಅಧಿಕಾರಕ್ಕೆ ತಂದರೆ ನಮ್ಮ ಸರ್ಕಾರವು ಆರನೇಗ್ಯಾರಂಟಿಯಾಗಿ ಬಿಸಿಯೂಟ ತಯಾರಕರಿಗೆ ಈಗಿರುವ ವೇತನಕ್ಕೆ ಬದಲಾಗಿ 6000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಬೆಳಗಾವಿಯ ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಘೋಷಿಸಿದ್ದರು. ಆದ್ದರಿಂದ ಕಾಂಗ್ರೆಸ್ ಸರ್ಕಾರವು ತಮ್ಮ ಪ್ರಣಾಳಕೆಯಲ್ಲಿ ಆರನೇ ಗ್ಯಾರಂಟಿಯಾಗಿ ಘೋಷಿಸಿದಂತೆ 2023 ರ ಜುಲೈ ತಿಂಗಳಲ್ಲಿ ಸರ್ಕಾರವು ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರಿಗೆ 6000/- ರೂಪಾಯಿಗೆ ವೇತನವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಬಿ.ಸಿ ಮಂಜುಳ,ಪಾರ್ವತಮ್ಮ,ನೀಲಮ್ಮ,ಇಂದ್ರಮ್ಮ,ಸರೋಜಮ್ಮ,ಹುಲಿಗೆಮ್ಮ,ಶಾರದಮ್ಮ,ದೇವಿಕುಮಾರಿ ಮತ್ತಿತರರಿದ್ದರು