ಬಿಸಿಲು ಕುದುರೆಗೆ  ಐವತ್ತರ  ಸಂಭ್ರಮ

ಚಿತ್ರ ಸಾಹಿತಿ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಐವತ್ತು ದಿನ ಪೂರೈಸಿದೆ. ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ

ನಿರ್ದೇಶಕ ಹೃದಯ ಶಿವ.ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ   ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ ದಿನ ಪೂರೈಸಿದೆ ಎಂದರು.

ಸದ್ಯದಲ್ಲೇ “ಬಿಸಿಲು ಕುದುರೆ” ಓಟಿಟಿಯಲ್ಲೂ ಬರಲಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಸದ್ಯದಲ್ಲೇ ನನ್ನ ನಿರ್ದೇಶನದಲ್ಲಿ ಎರಡು ಹೊಸ ಚಿತ್ರಗಳು ಆರಂಭವಾಗಲಿದೆ. ಅದರಲ್ಲಿ ಒಂದು ಬಿಗ್ ಬಜೆಟ್ ನ ಚಿತ್ರವಾಗಿರಲಿದೆ ಎಂದರು

ನಟ ಸಂಪತ್ ಮೈತ್ರೇಯ ಮಾಹಿತಿ‌ ನೀಡಿ, ಚಿತ್ರದ ಕುರಿತು ಬಿಡುಗಡೆ ಪೂರ್ವದಲ್ಲೇ ಸಾಕಷ್ಟು ಮಾತನಾಡಿದ್ದೇನೆ. ಈಗ ಐವತ್ತನೇ ದಿನದ ಸಂತೋಷವನ್ನು ಸಂಭ್ರಮಿಸುತ್ತಿದ್ದೇನೆ ಎಂದರು.

ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ವಿಕ್ಚರಿ ವಾಸು, ಸಂಗೀತ ನಿರ್ದೇಶಕ ಇಮ್ತಿಯಾಜ್ ಸುಲ್ತಾನ್, ಛಾಯಾಗ್ರಾಹಕ ನಾಗಾರ್ಜುನ, ಸಂಕಲನಕಾರ ಕೆಂಪರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ಬಿಸಿಲು ಕುದರೆ” ಯಶಸ್ಸಿನ ಬಗ್ಗೆ ಮಾತನಾಡಿದರು.