ಬೇಡಿಕೆಗೆ ಪಟ್ಟು: ಮಾ.21 ರಿಂದ ರಾಜ್ಯ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು, ಮಾ.14- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.21ರಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ರಾಜ್ಯ ಸಾರಿಗೆ ನೌಕರರ ಸಂಘ ಕರೆ ನೀಡಿದೆ. ಇದರಿಂದಾಗಿ ಯುಗಾದಿ ಹಬ್ಬಕ್ಕೆ ಪ್ರಯಾಣಿಕರಿಗೆ ಮುಷ್ಕರದ ಬಿಸಿ ತಟ್ಟಲಿದೆ.
ಮಾಚ್ 21ರಂದು ಬೆಳಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ ಎಂದು ರಾಜ್ಯ ಸಾರಿಗೆ ನೌಕರರ ಅಧ್ಯಕ್ಷ ಅನಂತ್ ಸುಬ್ಬಾರಾವ್ ತಿಳಿಸಿದ್ದಾರೆ.
ಮುಂದಿನ ಮಂಗಳವಾರ ಮುಷ್ಕರ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಸುಮಾರು 23 ಸಾವಿರ ಬಸ್‌ಗಳು ಸ್ಥಗಿತಗೊಳ್ಳಲಿವೆ. ಯಾವುದೇ ಕಾರಣಕ್ಕೂ ಡಿಪೋದಿಂದ ಬಸ್‌ಗಳನ್ನು ತೆಗೆಯಲ್ಲ ಎಂದು ಅವರು ಖಾಸಗಿ ಟಿವಿಗೆ ಮಾಹಿತಿ ನೀಡಿದ್ದಾರೆ.

ಬೇಡಿಕೆಗಳೇನು

  • ಮೂಲವೇತನ ಶೇ.25 ರಷ್ಟು ಹೆಚ್ಚಿಸಬೇಕು.
  • ಬಾಟಾ/ಭತ್ಯೆಯನ್ನು 5 ಪಟ್ಟು ಹೆಚ್ಚಿಸಲು ಆಗ್ರಹ
    *ಏಪ್ರಿಲ್ 2011 ರಂದು ವಜಾಗೊಂಡ ಸಿಬ್ಬಂದಿಯನ್ನು ಮರುನೇಮಕ ಮಾಡಬೇಕು
  • ಸಿಬ್ಬಂದಿ ಮೇಲೆ ದಾಖಲಾಗಿರುವ ಕೇಸ್‌ಗಳನ್ನ ರದ್ದು ಮಾಡಬೇಕು.
  • ಮುಷ್ಕರ ಸಮಯದಲ್ಲಿ ವರ್ಗಾವಣೆಯಾದ ನೌಕರರನ್ನು ಮೊದಲಿದ್ದ ಸ್ಥಳಕ್ಕೆ ಮತ್ತೆ ನಿಯುಕ್ತಿಗೊಳಿಸಬೇಕು.