ಭಗೀರಥ ಜಯಂತಿ: ಸರಳ ಆಚರಣೆ

ಚಿತ್ರದುರ್ಗ.ಏ.೨೮; ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಭಗೀರಥ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು.  ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರು ಭಗೀರಥರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹರೀಶ್, ಶ್ರೀ ಭಗೀರಥ ಜಿಲ್ಲಾ ಉಪ್ಪಾರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಎನ್.ವೀರೇಶ್, ಪ್ರಧಾನ ಕಾರ್ಯದರ್ಶಿ ಎನ್.ಮಹೇಶ್, ಗೌರವಾಧ್ಯಕ್ಷ ಎಸ್.ನಾಗರಾಜ್, ಉಪಾಧ್ಯಕ್ಷ ಹೆಚ್.ತಿಮ್ಮಣ್ಣ, ಖಜಾಂಚಿ ಹೆಚ್.ಅಜ್ಜಪ್ಪ, ತಾಲ್ಲೂಕು ಅಧ್ಯಕ್ಷ ಸಿದ್ದೇಶ್, ಯುವ ಘಟಕದ ಅಧ್ಯಕ್ಷ ಟಿ.ಅಜ್ಜಯ್ಯ ಸೇರಿದಂತೆ ಮತ್ತಿತರರು ಇದ್ದರು. ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ನಿರೂಪಿಸಿದರು.