
ಹೈದರಾಬಾದ್, ಮಾ.೧೫- ಬಹುಭಾಷಾ ನಟಿ ಸಮಂತಾ ಮತ್ತೆ ಭಾವುಕರಾಗಿ ಪೋಸ್ಟ್ ಮಾಡಿದ್ದಾರೆ. ಈಗಾಗಲೇ ಮೈಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಂಡ ಸಮಂತಾ ತಮ್ಮ ಮುಂದಿನ ಚಿತ್ರದ ಕುರಿತು ಬಹಳ ನಿರೀಕ್ಷೆಯೊಂದಿಗೆ ಮತ್ತೆ ಭಾವುಕರಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಗುಣಶೇಖರ್ ನಿರ್ದೇಶನದ ಶಾಕುಂತಲಂ ಚಿತ್ರವನ್ನು ಸಮಂತಾ ಈಗಾಗಲೇ ಮುಗಿಸಿ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಅಲ್ಲದೇ ಸ್ಯಾಮ್ ಚಿತ್ರದ ಫೈನಲ್ ಕಾಪಿ ನೋಡಿ ಖುಷ್ ಆಗಿದ್ದಾರೆ. ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡು ಇದು ನನಗೆ ತುಂಬಾ ಸ್ಪೆಷಲ್, ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ
ಈಗಷ್ಟೇ ಶಾಕುಂತಲಂ ಸಿನಿಮಾ ನೋಡಿದೆ. ನಿರ್ದೇಶಕ ಗುಣಶೇಖರ್ ಈ ಚಿತ್ರವನ್ನು ತುಂಬಾ ಸುಂದರವಾಗಿ ವಿನ್ಯಾಸಗೊಳಿಸಿದ್ದಾರೆ. ಅದರಲ್ಲಿನ ಭಾವನೆಗಳು ಎಲ್ಲರಿಗೂ ಇಷ್ಟವಾಗುತ್ತದೆ. ಈ ಚಿತ್ರ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಹೊಂದಿರುತ್ತದೆ. ಎಲ್ಲ ಫ್ಯಾಮಿಲಿ ಪ್ರೇಕ್ಷಕರು ಈ ಸಿನಿಮಾವನ್ನು ಯಾವಾಗ ನೋಡುತ್ತಾರೆ ಎಂದು ಕಾಯುತ್ತಿದ್ದೇನೆ ಎಂದು ಸಮಂತಾ ಹೇಳಿದ್ದಾರೆ.
ನಾಗ ಚೈತನ್ಯ ಜೊತೆಗಿನ ವಿಚ್ಛೇದನದ ನಂತರ, ಸಮಂತಾ ಸಿನಿಮಾ ಕೆಲಸಗಳ ಬಗ್ಗೆ ಗಮನ ಹರಿಸುತ್ತಿದ್ದಾರೆ. ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲಿ ಸಮಂತಾ ಬ್ಯುಸಿ ಆಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ಕೂಡ ಕಂಪ್ಲೀಟ್ ಮಾಡಿದ್ದಾರೆ. ಮೈಯೋಸಿಟಿಸ್ ಕಾಯಿಲೆಯಿಂದ ಕೆಲವು ತಿಂಗಳು ವಿಶ್ರಾಂತಿ ಪಡೆದಿದ್ದ ಸಮಂತಾ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ತಾವು ಮಾಡುತ್ತಿರುವ ಸಿನಿಮಾಗಳ ಸೆಟ್ಗೆ ಬಂದಿದ್ದ ಸ್ಯಾಮ್ ಶೂಟಿಂಗ್ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ಶಕುಂತಲಾ ಪಾತ್ರದಲ್ಲಿ ಸಮಂತಾ ನಟಿಸಿದ್ದಾರೆ, ಮಲಯಾಳಂ ಹೀರೋ ದೇವ್ ಮೋಹನ್ ದುಷ್ಯಂತು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಸಮಂತಾ ಅವರ ವೃತ್ತಿ ಜೀವನದಲ್ಲಿ ಮೊದಲ ಪೌರಾಣಿಕ ಚಿತ್ರವಾಗಿದೆ. ನೀಲಿಮಾ ಗುಣ ಮತ್ತು ದಿಲ್ ರಾಜು ಈ ಚಿತ್ರವನ್ನು ನಿರ್ಮಿಸುತ್ತಿರುವುದು ಪೌರಾಣಿಕ ಕಥೆಯಾದ ಶಾಕುಂತಲಂ ಅನ್ನು ಆಧರಿಸಿದೆ. ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿರುವ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾ ಕೂಡ ನಟಿಸಿದ್ದು, ಈ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.