ಭ್ರಷ್ಟಾಚಾರ ಮುಚ್ಚಿ ಹಾಕಲು ತರಾತುರಿಯಲ್ಲಿ ಈಜುಕೊಳ ಉದ್ಘಾಟನೆ:  ಆರೋಪ

ದಾವಣಗೆರೆ.ಮೇ.೩೧; ದಾವಣಗೆರೆ ಸಂಸದರು ಮತ್ತು ಬಿಜೆಪಿ ಸರ್ಕಾರದ ಹಿಂದಿನ ಸಚಿವರು ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಉದ್ದೇಶದಿಂದ ತರಾತುರಿಯಲ್ಲಿ ದೇವರಾಜ್ ಅರಸ್ ಬಡಾವಣೆಯ ಈಜುಕೊಳವನ್ನು ಉದ್ಘಾಟಿಸಲಾಗಿದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಆರೋಪಿಸಿದ್ದಾರೆ.ನಗರದ ದೇವರಾಜ್ ಅರಸ್ ಬಡಾವಣೆಯ ಈಜುಕೊಳವನ್ನು ವೀಕ್ಷಿಸಿ ಇನ್ನು ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲವು ಕಡೆ ಕಳಪೆ ಕಾಮಗಾರಿ ಆಗಿದ್ದರೂ ಸಹ ಏಕಾಏಕಿ ಉದ್ಘಾಟನೆ ಮಾಡಿರುವುದು ಏಕೆ ಎಂದು ಪ್ರಶ್ನಿಸಿದರು.ಸಂಸದರ ಮತ್ತು ಬಿಜೆಪಿಗರ ಭ್ರಷ್ಟಾಚಾರದಿಂದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಇದಕ್ಕೆ ಸಂಸದರು ಮತ್ತು ಹಿಂದಿನ ಜಿಲ್ಲಾ ಸಚಿವರೇ ಕಾರಣ ಎಂದು ಆರೋಪಿಸಿದ ಅವರು ಇಬ್ಬರು ಬಾಲಕರು ಸಾವನ್ನಪ್ಪಿದ್ದರು ಸಹ ಆ ಕುಟುಂಬಗಳಿಗೆ ಕನಿಷ್ಟ ಪಕ್ಷ ಸೌಜನ್ಯಕ್ಕಾದರೂ ಸಾಂತ್ವನ ಹೇಳುವ ಕೆಲಸ ಸಂಸದರಿAದ ಆಗಿಲ್ಲ ಎಂದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಕ್ರೀಡಾಪಟುಗಳು ಉಪಸ್ಥಿತರಿದ್ದರು.