ಮಳೆ ಹಾನಿ: ಆಸ್ತಿ ಕಳೆದುಕೊಂಡವರಿಗೆ ಸಹಾಯಧನ

ಸಂಜೆವಾಣಿ ವಾರ್ತೆ

ದಾವಣಗೆರೆ.ಆ.೧; ಕಳೆದ ವಾರ ಸುರಿದ ಮಳೆಯಿಂದ ಹಲವು ಕಡೆಗಳಲ್ಲಿ ಆಸ್ತಿಗಳಿಗೆ ಹಾನಿಯಾಗಿದ್ದು, ದಾವಣಗೆರೆ ತಾಲ್ಲೂಕಿನ 20 ಕಡೆಗಳಲ್ಲಿ ಹಾನಿಯಾಗಿರುವ ನಿರಾಶ್ರಿತ ಕುಟುಂಬಗಳಿಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಹಾಯಧನದ ಚೆಕ್ ವಿತರಿಸಿದರು ತಮ್ಮ ಗೃಹ ಕಛೇರಿಯಲ್ಲಿ ಚೆಕ್ ವಿತರಿಸಿದ ಸಚಿವರು ನಿರಾಶ್ರಿತರಿಗೆ ಸಾಂತ್ವನ ಹೇಳಿ ಮುಂದಿನ ದಿನಗಳಲ್ಲಿ ಏನೇ ತೊಂದರೆ ಆದರೂ ಸಹ ನಮ್ಮ ಗಮನಕ್ಕೆ ತರುವಂತೆ ತಿಳಿಸಿದರು.ಅತಿವೃಷ್ಟಿಯಾಗಲೀ, ಅನಾವೃಷ್ಟಿಯಾಗಲೀ ಅದರಿಂದ ಹಾನಿಗೊಳಗಾದ ಸಂತ್ರಸ್ಥರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಪರಿಹಾರ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಕೆ.ಪರಶುರಾಮ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ.ಕರಿಬಸಪ್ಪ, ಮುಖಂಡರುಗಳಾದ ಕಕ್ಕರಗೊಳ್ಳ ಗಿರೀಶ್, ಬೂದಾಳ್ ಬಾಬು, ತಹಶೀಲ್ದಾರ್ ಎಂ.ಬಿ.ಅಶ್ವಥ್ ಮತ್ತಿತರರಿದ್ದರು.