ಮಹಾ ಸರ್ಕಾರದಲ್ಲಿ ಬದಲಾಣೆ,ಅಧಿತ್ಯ ಭವಿಷ್ಯ

ಮುಂಬೈ, ಜು.೮-ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉದ್ಧವ್ ಠಾಕ್ರೆ ಪಾಳೆಯದ ಸದಸ್ಯ ಆದಿತ್ಯ ಠಾಕ್ರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡುವಂತೆ ಶಿಂಧೆ ಅವರನ್ನು ಕೇಳಲಾಗಿದೆ. ಶಿಂಧೆ ನೇತೃತ್ವದ ಸರ್ಕಾರದಲ್ಲಿ ಅಜಿತ್ ಪವಾರ್ ಪ್ರಸ್ತುತ ಉಪ ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಹಂಚಿಕೊಂಡಿದ್ದಾರೆ.
ಆದರೆ, ಮುಖ್ಯಮಂತ್ರಿ (ಏಕನಾಥ್ ಶಿಂಧೆ) ಅವರಿಗೆ ರಾಜೀನಾಮೆ ನೀಡುವಂತೆ ತಿಳಿಸಲಾಗಿದೆ ಹಾಗೂ ಸರ್ಕಾರದಲ್ಲಿ ಸ್ವಲ್ಪ ಬದಲಾವಣೆಯಾಗಬಹುದು ಎಂಬ ಮಾತನ್ನು ನಾನು ಕೇಳಲ್ಪಟ್ಟೆ ಎಂದು ತಿಳಿಸಿದರು.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ವಿರುದ್ಧ ಬಂಡಾಯ ಎದ್ದಿರುವ ಅಜಿತ್ ಪವಾರ್ ಹಾಗೂ ಅವರ ಬೆಂಬಲಿಗರು ಮೈತ್ರಿ ಸರಕಾರಕ್ಕೆ ಸೇರ್ಪಡೆಗೊಂಡ ನಂತರ ಬಿಜೆಪಿ ಪಕ್ಷು ಏಕನಾಥ್ ಶಿಂಧೆ ಗುಂಪನ್ನು ಬದಿಗೊತ್ತುತ್ತಿದೆ ಎಂಬ ವರದಿಗಳ ಮಧ್ಯೆ ಠಾಕ್ರೆ ಅವರು ಈ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ, ಎನ್ ಸಿಪಿ ನಾಯಕ ಅಜಿತ್ ಪವಾರ್ ರಾಜ್ಯ ಸರಕಾರಕ್ಕೆ ಸೇರಿದಾಗಿನಿಂದ ಶಿಂಧೆ ಅವರ ಗುಂಪಿನ ಸುಮಾರು ೨೦ ಶಾಸಕರು ತಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಶಿವಸೇನೆಯ (ಯುಬಿಟಿ) ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.