
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.25: ಬಿಜೆಪಿ ಸಂಸದ ಮತ್ತುಭಾರತದ ಕುಸ್ತಿ ಫೆಡರೇಷನ್ಅಧ್ಯಕ್ಷ(ಡಬ್ಲ್ಯುಎಫ್ಐ) ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಕೆಲವು ತರಬೇತುದಾರರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಅವರನ್ನುಕೂಡಲೇ ಬಂಧಿಸಬೇಕುಎಂದು ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯಲ್ಲಿ ನಡೆಸುತ್ತಿರುವಧರಣಿಯನ್ನು ಬೆಂಬಲಿಸಿ ನಗರದಲ್ಲಿಂದು ಎಐಡಿವೈಓ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಜಗದೀಶ್ ನೇಮಕಲ್ಲು, ದೆಹಲಿಯಲ್ಲಿ ಕುಸ್ತಿಪಟುಗಳ ಹೋರಾಟ ಒಂದು ತಿಂಗಳು ಮುಗಿದಿದೆ. ಇಷ್ಟಾದರೂ ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಅಲ್ಲದೇ ಅವರ ವಿರುದ್ಧ ಎಫ್ಐಆರ್ಕೂಡ ದಾಖಲಿಸಿಲ್ಲ. ಕೇಂದ್ರದ ಆಡಳಿತರೂಢ ಬಿಜೆಪಿ ಪಕ್ಷದ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್ರ ಪ್ರಭಾವಕ್ಕೆ ಪೊಲೀಸರು ಮಣಿದಿದ್ದಾರೆಎನ್ನುವ ಅನುಮಾನಗಳಿವೆ. ವಿಶ್ವಚಾಂಪಿಯನ್ಷಿಪ್, ಒಲಂಪಿಕ್ಸ್ ಹಾಗೂ ಏಷ್ಯನ್ ಕ್ರೀಡಾಕೂಟಗಳಲ್ಲಿ ಪದಕ ಗಳಿಸಿರುವ ಈ ಕುಸ್ತಿಪಟುಗಳ ದೂರು ಹಾಗೂ ಹೋರಾಟಕ್ಕೆ ಬೆಲೆ ಇಲ್ಲದಂತಾಗಿದೆ. ಈ ರೀತಿಧರಣಿ ನಡೆಸುತ್ತಿರುವುದು ಇದು ಎರಡನೇ ಬಾರಿ. ಅಲ್ಲದೆದೂರು ನೀಡಿರುವ ಏಳು ಸಂತ್ರಸ್ತೆಯರಲ್ಲಿಒಬ್ಬ ಬಾಲಕಿಯೂ ಇದ್ದಾಳೆ. ಆದ್ದರಿಂದ ಈ ಪ್ರಕರಣ ಪೋಕ್ಸೋ ಕಾಯ್ದೆ ಅಡಿಯಲ್ಲಿಯೂ ಬರುತ್ತದೆ. ಇಷ್ಟಾದರೂ ಪೊಲೀಸರುಕ್ರಮ ಕೈಗೊಳ್ಳದಿರುವುದನ್ನು ಗುರುತಿಸಿ ಸುಪ್ರೀಂಕೋರ್ಟ್ಅವರಿಗೆ ನೋಟಿಸ್ಜಾರಿ ಮಾಡಿದೆ. ಹಿಂದೆ ಈ ಪ್ರಕರಣದತನಿಖೆ ನಡೆಸಿದ ಮೇರಿಕೋಂ ಸಮಿತಿಯ ವರದಿಯನ್ನುಕ್ರೀಡಾ ಇಲಾಖೆ ಬಹಿರಂಗಪಡಿಸಿಲ್ಲ. ಇದು ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆರೋಪಿಗಳು ರಾಜಾರೋಷವಾಗಿ ತಿರುಗಾಡಿಕೊಂಡಿದ್ದಾರೆ. ಅಲ್ಲದೇ ಸಾಕ್ಷ ನಾಶಗೊಳಿಸಲು ಯತ್ನಿಸಿದ್ದಾರೆ ಮತ್ತುದೂರು ಹಿಂಪಡೆಯಲು ಸಂತ್ರಸ್ತರಿಗೆಜೀವ ಬೆದರಿಕೆ ಹಾಕಿದ್ದಾರೆಎಂದುಧರಣಿನಿರತ ಕುಸ್ತಿಪಟುಗಳು ದೂರಿದ್ದಾರೆ ಎಂದು ತಿಳಿಸಿದರು..
ಹಾಗೂ ಬಿಜೆಪಿ ಸಂಸದ ಮತ್ತುಡಬ್ಲ್ಯುಎಫ್ಐಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತಿತರ ಆರೋಪಿಗಳನ್ನುಪೋಕ್ಸೋಕಾಯ್ದೆಯಡಿತಕ್ಷಣವೇ ಬಂಧಿಸಬೇಕು, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸಂಸತ್ತಿನ ಸದಸ್ಯತ್ವವನ್ನುತಕ್ಷಣವೇ ರದ್ದುಗೊಳಿಸಿ ಮತ್ತುಅವರನ್ನು ಕುಸ್ತಿ ಫೆಡರೇಶನ್ನಿಂದ ಹೊರಹಾಕಬೇಕು, ಮತ್ತು ತ್ವರಿತ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿ ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು..