ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಅ.೧೨; ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವುದು ಅತ್ಯಗತ್ಯವಾಗಿದ್ದು, ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಹೇಳಿದರು.ನಗರದ ಶ್ರೀ ಗುರು ರಾಘವೇಂದ್ರ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಇಲಾಖೆ, ಶ್ರೀ ಗುರು ರಾಘವೇಂದ್ರ ವಿದ್ಯಾಸಂಸೆ ಇವರ ಸಂಯುಕ್ತಶ್ರದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮುಖ್ಯವಾದ ಅಂಶ. ಮಾನಸಿಕ ಆರೋಗ್ಯದ ರಕ್ಷಣೆಗಾಗಿ ಕಾನೂನಿನಲ್ಲಿ ಮಾನಸಿಕ ಆರೋಗ್ಯ ಕಾಯ್ದೆ ಇದೆ. ಕಾಯ್ದೆ ಅಡಿಯಲ್ಲಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಗುಣಮಟ್ಟದ ಮಾನಸಿಕ ಆರೋಗ್ಯ ಚಿಕಿತ್ಸೆ ಪಡೆಯುವ ಹಕ್ಕಿದೆ ಎಂದು ತಿಳಿಸಿದರು.ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಮಾತನಾಡಿ, ದೇಹದ ಹಾಗೇ ಮನಸ್ಸಿಗೂ ಕೂಡ ಕಾಯಿಲೆಗಳು ಬರುತ್ತವೆ. ನಾವು ದೇಹಕ್ಕೆ ಕಾಯಿಲೆ ಆದಾಗ ಹೇಗೆ ಚಿಕಿತ್ಸೆ ಪಡೆಯುತ್ತೇವೆ ಹಾಗೆಯೇ ಮಾನಸಿಕ ಆರೋಗ್ಯಕ್ಕೂ ಕೂಡ ವೈದ್ಯರಲ್ಲಿ ಚಿಕಿತ್ಸೆ ಪಡೆಯಬೇಕು. ದೈಹಿಕವಾಗಿ ಆರೋಗ್ಯಕರವಾಗಿರಲು ಮಾನಸಿಕ ಆರೋಗ್ಯವು ಬಹುಮುಖ್ಯ, ಮಾನಸಿಕ ತೊಂದರೆಗಳಿದ್ದಲ್ಲಿ ಕ್ಲಿನಿಕಲ್ ಸೈಕಾಲಜಿಸ್ಟ್ ಬಳಿ ಸಲಹೆ ಪಡೆಯಬಹುದು ಹಾಗೂ ಮನೋವೈದ್ಯರಿಂದ ಚಿಕಿತ್ಸೆ ಪಡೆದು ಗುಣಮುಖರಾಗಲು ಸೂಚಿಸಿದರು.ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುμÁ್ಠನಾಧಿಕಾರಿ ಜಿ.ಓ. ಡಾ. ನಾಗರಾಜ್ ಮಾತನಾಡಿ, ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಮನೋವೈದ್ಯರು, ಸೈಕಾಲಜಿಸ್ಟ್ ಸೋಶಿಯಲ್ ವರ್ಕರ್, ಶುಶ್ರೂμÁಧಿಕಾರಿಗಳು, ಡಿ.ಎಂ.ಹೆಚ್.ಪಿ ತಂಡವು ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ರೀತಿಯ ಮಾನಸಿಕ ರೋಗ ಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆ ಪಡೆಯಬೇಕು. ಮಾನಸಿಕ ರೋಗಿಗಳನ್ನು ಬಂಧನದಲ್ಲಿರಿಸುವುದು, ಕಟ್ಟಿ ಹಾಕುವುದು, ಹಿಂಸೆ ಕೊಡುವುದು ಇವುಗಳಿಗೆ ಅವಕಾಶ ನೀಡಬಾರದು. ಮುಂಚಿತವಾಗಿ ಗುರುತಿಸಿ ಚಿಕಿತ್ಸೆ ನೀಡುವುದರ ಮೂಲಕ ಗುಣಪಡಿಸಬೇಕು ಎಂದರು.