
ಸಂಜೆವಾಣಿ ವಾರ್ತೆ
ದಾವಣಗೆರೆ.ಆ.೩೧: ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ 2000 ರೂ. ನೀಡುವ ಗೃಹಲಕ್ಷಿö್ಮà ಯೋಜನೆಯನ್ನು ಸರ್ಕಾರ ಜಾರಿಗೆ ತಂದಿರುವುದು ಬಡವರ ಆರ್ಥಿಕಾಭಿವೃದ್ಧಿಗೆ ಉತ್ತಮ ಮಾರ್ಗವಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.ತಾಲೂಕಿನ ಮಾಯಕೊಂಡ ಗ್ರಾಮದ ಸಮುದಾಯ ಭವನದಲ್ಲಿ ಗೃಹಲಕ್ಷಿö್ಮà ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಮಹಿಳೆಯರಿಗೆ ಅದೃಷ್ಟದ ದಿನ. ಮೈಸೂರಿನಲ್ಲಿ ರಾಷ್ಟಿçÃಯ ನಾಯಕ ರಾಹುಲ್ ಗಾಂಧಿಯವರು ಗೃಹಲಕ್ಷಿö್ಮà ಯೋಜನೆಗೆ ಚಾಲನೆ ನೀಡಿದ್ದಾರೆ. ಇದರಿಂದ ರಾಜ್ಯದÀ ಪ್ರತಿಯೊಬ್ಬ ತಾಯಂದಿಯರಿಗೆ ಗೃಹಲಕ್ಷಿö್ಮà ಯೋಜನೆಯ ಸೌಲಭ್ಯ ಸಿಗಲಿದೆ. ಇದಕ್ಕೆ ಕಾರಣರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷಿö್ಮÃಹೆಬ್ಬಾಳ್ಕರ್ ಅವರಿಗೆ ಶುಭ ಹಾರೈಸಿದರು. ಗೃಹಲಕ್ಷಿö್ಮà ಯೋಜನೆಗೆ ನೋಂದಾಯಿಸಿರುವ ಎಲ್ಲಾ ಮಹಿಳೆಯರಿಗೆ 2000 ರೂ. ಅವರ ಖಾತೆಗೆ ಜಮಾ ಮಾಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಯಾವುದೇ ಕಾರಣಕ್ಕೂ ಮಹಿಳೆಯರಿಂದ ದೂರುಗಳು ಬರದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಪಂ ಇಒ ರಾಮಭೋವಿ, ಉಪತಹಸೀಲ್ದಾರ್ ಹಾಲೇಶಪ್ಪ, ಸಿಡಿಪಿಒ ಶಶಿಕುಮಾರ್, ಗ್ರಾಪಂ ಅಧ್ಯಕ್ಷೆ ಶಿವಮ್ಮ ಮಲ್ಲಿಕಪ್ಪ, ಪಿಡಿಒ ನಾಗರಾಜ್, ಮಾಯಕೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ.ಹನುಮಂತಪ್ಪ, ಗೋಪಾಲ್, ರುದ್ರೇಶ್, ಗ್ರಾಪಂ ಸದಸ್ಯರು, ಪೊಲೀಸ್ ಸಿಬ್ಬಂದಿಗಳು ಇದ್ದರು.