
ದಾವಣಗೆರೆ.ಮಾ.೭ : ಸಪ್ತ ರಿಷಿ ಯೋಗಾದಾರ್ ಸ್ಪೋರ್ಟ್ಸ್ ಅಕಾಡೆಮಿ ದಾವಣಗೆರೆ -ಹರಿಹರ ಆಶ್ರಯದಲ್ಲಿ ಮಾ. 12 ರಂದು ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯನ್ನು ಹರಿಹರದ ಶ್ರೀ ಸತ್ಯ ಗಣಪತಿ ದೇವಸ್ಥಾನದ ಆವರಣದಲ್ಲಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಹತ್ತಿರ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಗೆ ಶಾಲಾ ಮಕ್ಕಳು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಯೋಗ ಸಂಘ ಸಂಸ್ಥೆಗಳು ಹೆಚ್ಚಿನ ತಂಡಗಳನ್ನು ಕರೆತರಬೇಕೆಂದು ಸಂಸ್ಥೆಯ ಅಧ್ಯಕ್ಷರಾದ ಡಾಕ್ಟರೇಟ್ ಪುರಸ್ಕೃತರಾದ ಕೆ ಜೈ ಮುನಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9844 286620. ಇವರನ್ನು ಸಂಪರ್ಕಿಸಲು ಕೋರಲಾಗಿದೆ.