
ದಾವಣಗೆರೆ.ಜೂ.೨೭: ಮುಂದಿನ ೨೦೨೩ರ ರಾಜ್ಯ ವಿಧಾನ ಸಭಾಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಸಾಂಸ್ಥಿಕ ಚುನಾವಣೆಗಳ ಉಸ್ತುವಾರಿ ಅಭಿಲಾಷ್ರಾವ್ ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧಿ, ದೇಶದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರು ಒಳಗೊಂಡಂತೆ ಅನೇಕರು ಕಟ್ಟಿರುವ ಕಾಂಗ್ರೆಸ್ನ್ನು ರಾಜ್ಯದಲ್ಲಿ ಮತ್ತೊಮ್ಮೆ ಅಽಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಮುಂದಿನ ಚುನಾವಣೆಯಲ್ಲಿ ಕರ್ನಾಟಕ ಮಾತ್ರ ಅಲ್ಲ ತೆಲಂಗಾಣದಲ್ಲೂ ಕಾಂಗ್ರೆಸ್ ಅಽಕಾರಕ್ಕೆ ಬರಲಿದೆ ಎಂದರು.ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಸರ್ಕಾರಗಳಿವೆ. ಡಬ್ಬಲ್ ಇಂಜಿನ್ ಸರ್ಕಾರಗಳು ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನರಿಗೆ ತಿಳಿಸಬೇಕು. ಸರ್ಕಾರಗಳ ವೈಫಲ್ಯಗಳ ಬಗ್ಗೆ ಜನಾರಿವು ರೂಪಿಸಬೇಕು ಎಂದು ತಿಳಿಸಿದರು.ಒಟ್ಟು ಮತದಾರರಲ್ಲಿ ಅರ್ಧದಷ್ಟು ಇರುವ ಮಹಿಳೆಯರಿಗೆ ಪ್ರಾಮುಖ್ಯತೆ ಕೊಡಬೇಕಾಗಿದೆ. ಕಾಂಗ್ರೆಸ್ ಮಹಿಳೆ ಯರಿಗೆ ಪಕ್ಷದಲ್ಲಿ ಶೇ.೩೩ರಷ್ಟು ಸ್ಥಾನಗಳನ್ನು ಕಡ್ಡಾಯವಾಗಿ ನೀಡಲಿದೆ. ಸೋನಿಯಾಗಾಂಽ ಮತ್ತು ರಾಹುಲ್ ಗಾಂಽಯವರು ದೇಶ, ಜನರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ. ಎಲ್ಲರೂ ಸಂಘಟಿತರಾಗಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ತಿಳಿಸಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆಸಗೋಡು ಜಯಸಿಂಹ ಮಾತನಾಡಿ, ಕಾಂಗ್ರೆಸ್ನಲ್ಲಿರುವ ನಾಯಕರು ಕೇವಲ ಅವರ ಜಾತಿಯವರನ್ನು ಸುತ್ತಮುತ್ತ ಇಟ್ಟುಕೊಳ್ಳಬಾರದು. ಎಲ್ಲ ಜಾತಿ, ಧರ್ಮದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕು. ಕಾಂಗ್ರೆಸ್ಗೆ ಹಿನ್ನಡೆ ಇಲ್ಲ. ಕಾಂಗ್ರೆಸ್ ದೇಶ ಮತ್ತು ರಾಜ್ಯಕ್ಕೆ ಅನಿವಾರ್ಯವಾಗಿದೆ. ಬಿಜೆಪಿ ತಾತ್ಕಾಲಿಕವಾಗಿ ಅಽಕಾರದಲ್ಲಿ ಇದೆ. ಕಾಂಗ್ರೆಸ್ನಿಂದ ಮಾತ್ರ ಜನರಿಗೆ ಒಳಿತಾಗಲು ಸಾಧ್ಯ ಎಂದು ತಿಳಿಸಿದರು.ಜಿಲ್ಲಾ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಶಾಂತಿ ರೀತಿಯಿಂದ ನಡೆದು ಕೊಳ್ಳಬೇಕು. ವೀಕ್ಷಕರು ಯಾವುದೇ ಚುನಾವಣಾ ಅಭ್ಯರ್ಥಿ ಆಯ್ಕೆ ಮಾಡಲು ಬಂದಿಲ್ಲ. ಸಭೆ ಪಕ್ಷ ಕಟ್ಟುವ ಉದ್ದೇಶದಿಂದ ಕರೆದಿದ್ದೇವೆ. ಟಿಕೆಟ್ ಕೊಡುವುದಕ್ಕಲ್ಲ. ಎಲ್ಲರೂ ಸೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲಿಷ್ಠಗೊಳಿಸುವ ಕೆಲಸ ಮಾಡೋಣ ಎಂದು ಮನವಿ ಮಾಡಿದರು.ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಸದೃಢಗೊಳಿಸಲು ನಾವೆಲ್ಲರೂ ಒಗ್ಗಟ್ಟಾಗಿ ದುಡಿಯಬೇಕು. ವಿಧಾನಸಭಾ ಚುನಾವಣೆ ಇನ್ನು ೮ ತಿಂಗಳು ಉಳಿದಿರುವುದರಿಂದ ಕಾಂಗ್ರೆಸ್ನ್ನು ಅಽಕಾರಕ್ಕೆ ತರಲು ಒಗ್ಗಟ್ಟಾಗಿ ದುಡಿಯಬೇಕು. ಪಕ್ಷ ಯಾರಿಗೇ ಟಿಕೆಟ್ ಕೊಟ್ಟರೂ ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ತಿಳಿಸಿದರು.