
ಯಾದಗಿರಿ : ಮೇ 24 : ಮುಖ್ಯ ಶಿಕ್ಷಕರು ಹುದ್ದೆಯ ಅಗತ್ಯತೆಗೆ ವೈಯಕ್ತಿಕ ಸಾಮಥ್ರ್ಯವನ್ನು ಹೆಚ್ಚಿಸಿಕೊಂಡು ಶೈಕ್ಷಣಿಕ ಅಭಿವೃದ್ಧಿಗೆ ಪರಿಣಾಮಕಾರಿಯಾಗಿ ತೊಡಗಿಸಿಕೊಂಡು ಸಮುದಾಯದ ಸಹಭಾಗಿತ್ವ ಖಾತ್ರಿಪಡಿಸುವುದು ಪ್ರಮುಖವಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಗರಿಮಾ ಪನ್ವಾರ್ ಅವರು ಹೇಳಿದರು.
ನಗರದ ಅಜೀಂ ಪ್ರೇಮ್ಜೀ ಪ್ರತಿಷ್ಟಾನ ಶಾಲಾ ಸಭಾಂಗಣದಲ್ಲಿ ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಯಾದಗಿರಿ ಹಾಗೂ ಮಂತ್ರ ಸೋಸಿಯಲ್ ಸರ್ವಿಸ್ ಸಂಸ್ಥೆಯ ಮತ್ತು ಅಜೀಂ ಪ್ರೇಮಜೀ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಸಮರ್ಥ-ಮುಖ್ಯ ಶಿಕ್ಷಕರ ನಾಯಕತ್ವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಗುರುಗಳು, ಶಿಕ್ಷಕರ ವ್ಯಕ್ತಿತ್ವವು ವಿದ್ಯಾರ್ಥಿಗಳ ಮೇಲೆ ಘಾಡ ಪ್ರಭಾವ ಬಿರುವ ನಿಮಿತ್ಯ ಶಿಕ್ಷಕರು ಆದರ್ಶವನ್ನು ಮೈಗೂಡಿಸಿಕೊಳ್ಳಬೇಕು. ವರ್ಷ ಪೂರ್ತಿ ಶಿಕ್ಷಕರಿಗೆ ಶಾಲಾ ಹಂತದಲ್ಲಿ ನಾವಿನ್ಯಯುತ ಯೋಜನೆಗಳನ್ನು ಮಾಡಲು ಅವಕಾಶ ಕಲ್ಪಿಸುತ್ತದೆ ಮತ್ತು ಜಿಲ್ಲಾ ಶಿಕ್ಷಣ ಇಲಾಖೆಯ ಜೊತೆಗೆ ಜಿಲ್ಲಾ ಪಂಚಾಯತಿ ಕೂಡ ಈ ಕಾರ್ಯಕ್ರಮದ ಅನುಷ್ಟಾನದ ಜವಾಬ್ದಾರಿ ವಹಿಸುತ್ತದೆ ಎಂದು ತಿಳಿಸಿದರು.
ಯಾದಗಿರಿ ಜಿಲ್ಲಾ ಪಂಚಾಯತಿ ಇತ್ತೀಚಿಗೆ ನಡೆದ ಕಾರ್ಯಕ್ರಮ ಮೇ 22 ರಂದು ಕಲಬುರಗಿ, ಅಪರ ಆಯುಕ್ತರ ಕಛೇ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು. ಇವರುಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತಿಳಿಸಿರುವಂತೆ ನಾಯಕತ್ವ ಆಯಾಮಗಳಾದ ಸ್ವಯಂ ಅಭಿವೃದ್ದಿ, ಸಾಂಸ್ಥಿಕ ಅಭಿವೃದ್ಧಿ, ಸಮುದಾಯದ ಪಾಲ್ಗೊಳ್ಳುವಿಕೆ, ಶೈಕ್ಷಣಿಕ ಒಳಗೊಳ್ಳುವಿಕೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಕಾರ್ಯಾಗಾರದಲ್ಲಿ ಶಾಲೆಯಲ್ಲಿ ಮಗುವಿಗೆ ಕಲಿಕಾ ಅನುಭವವನ್ನು ಕಟ್ಟಿ ಕೊಡುವ ವಾತಾವರಣವನ್ನು ಕಲ್ಪಿಸುವ ನಿಟ್ಟಿನಲ್ಲಿ ಶಾಲಾ ಪರಿಸ್ಥಿತಿ ಮತ್ತು ಅವಕಾಶಗಳನ್ನು ಅವಲೋಕಿಸಲಾಯಿತು.
ಈ ತರಬೇತಿಯ ಅಂಗವಾಗಿ ಮುಂದಿನ ದಿನಗಳಲ್ಲಿ ಯಾದಗಿರಿ ಜಿಲ್ಲೆಯಾದ್ಯಂತ ಶೈಕ್ಷಣಿಕ ಯೋಜನೆಗಳನ್ನು ಕೈಗೆತ್ತುಕೊಂಡು ಶಾಲಾಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಮುಖ್ಯ ಶಿಕ್ಷಕರು ಸಕ್ರೀಯವಾಗಿ ತೊಡಗಿಕೊಳ್ಳುವ ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು. ಈ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಯೋಜನೆ ಮಾಡಿಕೊಳ್ಳಲಾಯಿತು.
ಮುಖ್ಯ ಶಿಕ್ಷಕರು ಪ್ರೇರಣೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕು. ಶಾಲಾಭಿವೃದ್ಧಿಗೆ ಸಿಗುವ ಅನುದಾನಗಳ ಬಗ್ಗೆ ಮಾಹಿತಿ ಪಡೆಯುವುದು, ವಿವಿಧ ಇಲಾಖೆಗಳಲ್ಲಿರುವ ಅನುದಾನಗಳನ್ನು ಕೇಳಿ ಬಳಸಿಕೊಳ್ಳುವ ಬಗ್ಗೆ ಮುಖ್ಯ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು.
ಯಾದಗಿರಿ ಡಯಟ್ ಪ್ರಾಂಶುಪಾಲರು ಶ್ರೀಶೈಲ್ ಎಸ್ ಬಿರಾದಾರ ಮಾತನಾಡಿ, 1ನೇ ತರಗತಿಗೆ ದಾಖಲಾದ ಮಗು 10 ನೇ ತರಗತಿಯ ವರೆಗೆ ಶಿಕ್ಷಣ ಮುಂದುವರೆಸಲು ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಮಕ್ಕಳು ಶಾಲೆಯಲ್ಲಿ ಉಳಿದುಕೊಳ್ಳುವಂತೆ ಹಾಗೂ ಗುಣಾತ್ಮಕ ಶಿಕ್ಷಣ ಪಡೆಯುವಂತೆ ಕ್ರಿಯಾ ಯೋಜನೆ ಸಿದ್ದಪಡಿಸಲು ಮಾರ್ಗದರ್ಶನ ನೀಡಿದರು. ಚಿಕ್ಕ-ಚಿಕ್ಕ ಕಾರ್ಯಗಳ ಮುಖಾಂತರ ಸಾಧನೆಯ ಸಂಭ್ರಮಾಚರಣೆಯನ್ನು ಆಚರಿಸೋಣವೆಂದು ಮಂತ್ರಾ ಸಂಸ್ಥೆಯವರು ಕಾರ್ಯಗಾರದಲ್ಲಿ ತಿಳಿಸಿದರು.
ಜಿಲ್ಲೆಯ ಡಯಟಿನ ಎಲ್ಲಾ ಹಿರಿಯ ಉಪನ್ಯಾಸಕರು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು, ಸುರಪುರ, ಶಹಾಪುರ ಮತ್ತು ಯಾದಗಿರಿ ತಾಲ್ಲೂಕಿನ ಎಲ್ಲಾ ಮುಖ್ಯ ಶಿಕ್ಷಕರು, ಶಹಾಪುರ ಸುರಪೂರ ಮತ್ತು ಯಾದಗಿರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.