
ಜಗಳೂರು.ಏ.೧೨: ಸೂಕ್ತ ದಾಖಲೆಗಳಿಲ್ಲದ 2.80 ಲಕ್ಷ. ಹಣವನ್ನು ಅಧಿಕಾರಿಗಳು ವಶಪಡಿಸಿ ಕೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕು ಮುಸ್ಟೂರು ಚೆಕ್ ಪೋಸ್ಟ್ನಲ್ಲಿ ನಡೆದಿದೆ. ವಾಹನ ತಪಾಸಣೆ ವೇಳೆ ವಶಪಡಿಸಿಕೊಂಡ ಹಣವು ಸಂಘದ್ದು ಎನ್ನಲಾಗಿದೆ. ಹಣವನ್ನು ಹೊಂದಿದ್ದ ಸಂಘದ ಪ್ರತಿನಿಧಿ ಸೂಕ್ತ ದಾಖಲೆ ತೋರಿಸದ ಕಾರಣ ಹಣವನ್ನು ವಶಪಡಿಸಿ ಕೊಳ್ಳಲಾಗಿದೆ. ಸರಿಯಾದ ದಾಖಲೆ ಸಲ್ಲಿಸಿ ಹಣ ವಾಪಾಸ್ಸು ಪಡೆಯುವಂತೆ ಸೂಚಿಸಲಾಗಿದೆ.ಈ ಸಂದರ್ಭದಲ್ಲಿ ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣೆ ಅಧಿಕಾರಿ ಸಂತೋಷ್ ಕುಮಾರ್ ಜಿ. ಎಸ್ಎಸ್ಟಿ ಕಾರ್ಯನಿರ್ವಾಹಕ ದಂಡಾಧಿಕಾರಿ ರಮೇಶ್ ನಾಯ್ಕ.ಡಿ ಕೃಷಿ ಅಧಿಕಾರಿ ಮಿಥುನ್ ಕೀಮಾವತ್ ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ಹಾಜರಿದ್ದರು