ನವದೆಹಲಿ,ಸೆ.೨೪-ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ದೇಶದ ಹೊಸ ಶಕ್ತಿಯ ಪ್ರತಿಬಿಂಬವಾಗಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ೧೧ ರಾಜ್ಯಗಳಲ್ಲಿ ಒಂಬತ್ತು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಪ್ರಾರಂಭದಿಂದ ದೇಶದಲ್ಲಿ, ಸಂಪರ್ಕ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಈಗಾಗಲೇ ೨೫ ವಂದೇ ಭಾರತ್ ರೈಲುಗಳು ಈಗಾಗಲೇ ಓಡುತ್ತಿವೆ, ಈಗ ಅವುಗಳಿಗೆ ಇನ್ನೂ ಒಂಬತ್ತುಗಳನ್ನು ಸೇರಿವೆ.ಇದರಿಂದಾಗಿ ದೇಶಾದ್ಯಂತ ಸಂಪರ್ಕ ಸುಧಾರಣೆ ಜೊತೆಗೆ ಪ್ರವಾಸೋದ್ಯಮ ಉತ್ತೇಜನಕ್ಕೆ ನೆರವಾಗಲಿದೆ ಎಂದಿದ್ದಾರೆ.
ಕರ್ನಾಟಕ,ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ಸೇರಿ ೧೧ ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ೯ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ವರ್ಚುವಲ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು
ವಂದೇ ಭಾರತ್ ರೈಲುಗಳ ಜನಪ್ರಿಯತೆ ನಿರಂತರವಾಗಿ ಹೆಚ್ಚುತ್ತಿದೆ. ೧,೧೧,೦೦,೦೦೦ ಕ್ಕೂ ಹೆಚ್ಚು ಪ್ರಯಾಣಿಕರು ಈಗಾಗಲೇ ಪ್ರಯಾಣಿಸಿದ್ದಾರೆ”.ವೇಗ, ಮೂಲಸೌಕರ್ಯ ಅಭಿವೃದ್ಧಿಯ ಪ್ರಮಾಣ ೧೪೦ ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಪೂರಕವಾಗಿದೆ ಎಂದಿದ್ದಾರೆ.
ದೇಶಾದ್ಯಾಂತ ಜನರು ವಂದೇ ಸೌಲಭ್ಯವನ್ನು ಪಡೆಯುತ್ತಾರೆ. ಭಾರತ್ ಎಕ್ಸ್ಪ್ರೆಸ್ ರೈಲುಗಳು. ಈ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ದೇಶದ ಹೊಸ ಶಕ್ತಿಯನ್ನು ಬಿಂಬಿಸುತ್ತವೆ” “ಕಳೆದ ಹಲವಾರು ವರ್ಷಗಳಿಂದ ಅಭಿವೃದ್ಧಿಯಾಗದ ಹಲವಾರು ರೈಲು ನಿಲ್ದಾಣಗಳಿವೆ .ಈಗ ಅವುಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ ಎಂದಿದ್ದಾರೆ.
ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವ ಕೆಲಸಗಳು ನಡೆಯುತ್ತಿವೆ … ’ಆಜಾದಿ ಕಾ ಅಮೃತ್ ಕಾಲ್ ನಲ್ಲಿ ಅಭಿವೃದ್ಧಿಪಡಿಸಲಾಗುವ ಎಲ್ಲಾ ನಿಲ್ದಾಣಗಳು ೧೧ ರಾಜ್ಯಗಳಲ್ಲಿ ಸಂಪರ್ಕವನ್ನು ಸುಧಾರಿಸಲು ಒಂಬತ್ತು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಂಪರ್ಕ ಕಲ್ಪಿಸಲಿದೆ ಎಂದಿದ್ದಾರೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಯಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ರೈಲ್ವೆ ಕ್ಷೇತ್ರವು ಬದಲಾಗಿದೆ… ಹಲವಾರು ಹೊಸ ಸೌಲಭ್ಯಗಳನ್ನು ಸ್ಥಾಪಿಸಲಾಗುತ್ತಿದೆ ಎಂದಿದ್ದಾರೆ.
ಎಲ್ಲೆಲ್ಲಿ ಆರಂಭ
ಹೈದರಾಬಾದ್ – ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್, ಉದಯಪುರ – ಜೈಪುರ ವಂದೇ ಭಾರತ್ ಎಕ್ಸ್ಪ್ರೆಸ್, ತಿರುನಲ್ವೇಲಿ-ಮಧುರೈ – ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್, ವಿಜಯವಾಡ – ಚೆನ್ನೈ (ರೇಣಿಗುಂಟಾ ಮೂಲಕ) ವಂದೇ ಭಾರತ್ ಎಕ್ಸ್ಪ್ರೆಸ್, ಪಾಟ್ನಾ – ಹೌರಾ ವಂದೇ ಭಾರತ್ ಎಕ್ಸ್ಪ್ರೆಸ್ ಎಕ್ಸ್ಪ್ರೆಸ್, ಕಾಸರಗೋಡು – ತಿರುವನಂತಪುರಂ ವಂದೇ ಭಾರತ್ ಎಕ್ಸ್ಪ್ರೆಸ್, ರೂರ್ಕೆಲಾ – ಭುವನೇಶ್ವರ್ – ಪುರಿ ವಂದೇ ಭಾರತ್ ಎಕ್ಸ್ಪ್ರೆಸ್, ರಾಂಚಿ – ಹೌರಾ ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಜಾಮ್ನಗರ-ಅಹಮದಾಬಾದ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭವಾಗಿದೆ.ಈ ಮಾರ್ಗದಲ್ಲಿ ಪ್ರಸ್ತುತ ವೇಗದ ರೈಲಿಗೆ ಹೋಲಿಸಿದರೆ, ರೂರ್ಕೆಲಾ- ಭುವನೇಶ್ವರ್ – ಪುರಿ ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಕಾಸರಗೋಡು – ತಿರುವನಂತಪುರಂ ವಂದೇ ಭಾರತ್ ಎಕ್ಸ್ಪ್ರೆಸ್ ಸುಮಾರು ೩ ಗಂಟೆಗಳ ಕಾಲ ಸಮಯ ಇದಾಗಿದೆ ಎಂದು ಭಾರತೀಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಹೈದರಾಬಾದ್-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ೨.೫ ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ತಿರುನಲ್ವೇಲಿ-ಮಧುರೈ-ಚೆನ್ನೈ ವಂದೇ ಭಾರತ್ ಎಕ್ಸ್ಪ್ರೆಸ್ ೨ ಗಂಟೆ, ರಾಂಚಿ – ಹೌರಾ ವಂದೇ ಭಾರತ್ ಎಕ್ಸ್ಪ್ರೆಸ್, ಪಾಟ್ನಾ – ಹೌರಾ ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಜಾಮ್ನಗರ-ಅಹಮದಾಬಾದ್ ವಂದೇ ಭಾರತ್ ಎಕ್ಸ್ಪ್ರೆಸ್ ಸುಮಾರು ೧ ಗಂಟೆ ಮತ್ತು ಉದಯಪುರ – ಜೈಪುರ ವಂದೇ ಭಾರತ್ ಎಕ್ಸ್ಪ್ರೆಸ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಉಳಿಯಾತಾಯವಾಗಲಿದೆ