
ನವದೆಹಲಿ,ಜು.೨೫- ಮಣಿಪುರ ಹಿಂಸಾಚಾರದ ಸದನದಲ್ಲಿ ಉತ್ತರ ನೀಡಿ ಎಂದರೆ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈಸ್ಟ್ ಇಂಡಿಯಾ ಕಂಪನಿ ಎನ್ನುತ್ತಾರೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಮಣಿಪುರ ಹೊತ್ತಿ ಉರಿಯುತ್ತಿದೆ. ಆ ಬಗ್ಗೆ ಮಾತನಾಡಿ ಎಂದರೆ ವಿರೋಧ ಪಕ್ಷಗಳ ಬಗ್ಗೆ ಮಾತನಾಡುತ್ತಾರೆ. ಇದು ನಾಚಿಗೇಡಿನ ಸಂಗತಿ ಎಂದಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು ಕಳೆದ ದಿನಗಳಿಂದ ೨೬೭ ಅಡಿಯಲ್ಲಿ ಹಲವು ಸದಸ್ಯರು ಮಣಿಪುರ ವಿಷಯದ ಬಗ್ಗೆ ನೋಟಿಸ್ ನೀಡಿದ್ದಾರೆ, ಚರ್ಚೆಗೆ ಅವಕಾಶ ನೀಡಿ ಉತ್ತರ ನೀಡುವ ಬದಲು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರದು ಪಲಾಯನವಾದ ಎಂದಿದ್ದಾರೆ.
೨೦೧೬ ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಚರ್ಚೆ ನಡೆಯಬೇಕು ಎಂದು ಒತ್ತಾಯ ಮಾಡಿದ್ದೆವು. ಇದು ಮೊದಲ ಬಾರಿಗೆ ಅಲ್ಲ, ಕಾಂಗ್ರೆಸ್ ಸರ್ಕಾರ ಇದ್ದಾದ ಚರ್ಚೆಗೆ ಅವಕಾಶ ನೀಡಲಾಯಿತು. ಆದರೆ ಮಣಿಪುರ ಹೊತ್ತಿ ಉರಿಯುತ್ತಿದೆ. ನಾವು ಇದನ್ನು ನಿರಂತರವಾಗಿ ಪ್ರಸ್ತಾಪಿಸುತ್ತಿದ್ದೇವೆ ಮತ್ತು ಪ್ರಧಾನಿ ಈಸ್ಟ್ ಇಂಡಿಯಾ ಎಂದು ಹೇಳುತ್ತಿದ್ದಾರೆ” ಎಂದು ದೂರಿದ್ದಾರೆ.
ಕಲಾಪ ಮುಂದೂಡಿಕೆ
ಮಣಿಪುರ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ಗದ್ದಲ ನಡೆಸಿದ ಹಿನ್ನೆಲೆಯಲ್ಲಿ ಎರಡು ಬಾರಿ ಕಲಾಪವನ್ನು ಎರಡು ಬಾರಿ ಮುಂದೂಡಲಾಯಿತು.
ಮಧ್ಯಾಹ್ನ ೧೨ ಗಂಟೆಗೆ ರಾಜ್ಯಸಭೆ ಪುನರಾರಂಭವಾಯಿತು. ಮಣಿಪುರ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷ ನಾಯಕರ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ನಂತರ ಮಧ್ಯಾಹ್ನಕ್ಕೆ ಕಲಾಪ ಮುಂದೂಡಿದರು.