ರಾಜನಹಳ್ಳಿಯ ವಾಲ್ಮೀಕಿ ಗುರುಪೀಠ ಟ್ರಸ್ಟ್ ಸೂಪರ್ ಸೀಡ್ ಗೆ ಒತ್ತಾಯ

ಸಂಜೆವಾಣಿ ವಾರ್ತೆ

ದಾವಣಗೆರೆ.ಜು.೪: ಹರಿಹರ ತಾಲೂಕಿನ ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ನ್ನು ಸೂಪರ್ ಸೀಡ್ ಮಾಡಬೇಕು ಎಂದು ಕೋರಿ ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದುನ್ಯಾಯವಾದಿ ಕೆ.ಎಂ. ಮಲ್ಲಿಕಾರ್ಜುನ ಗುಮ್ಮನೂರು ತಿಳಿಸಿದರು.ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಅವರು ಟ್ರಸ್ಟಿನ ಅನೇಕ ನಿಯಮಗಳನ್ನು ಅತ್ಯಂತ ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಟ್ರಸ್ಟ್ ನ್ನು ಸೂಪರ್ ಸೀಡ್ ಮಾಡಬೇಕು ಎಂದು ನ್ಯಾಯಾಲಯದಲ್ಲಿ ಜು. 3 ರಂದು ದಾವೆ ಹೂಡಲಾಗಿದೆ ಎಂದು ತಿಳಿಸಿದರು.1998 ರ ಜೂ. 23 ರಂದು ಎಲ್.ಜಿ. ಹಾವನೂರು ಅವರು ವಾಲ್ಮೀಕಿ ಗುರು ಪೀಠ ಟ್ರಸ್ಟ್ ರಚಿಸಿದ್ದರು. 2016 ರಲ್ಲಿ ಈಗಿರುವ ಸ್ವಾಮೀಜಿಯವರು ಟ್ರಸ್ಟ್ ನ್ನು ಪುನರ್ ರಚನೆ ಮಾಡಿದ್ದಾರೆ. ಟ್ರಸ್ಟ್ ನಿಯಮಗಳ ಪ್ರಕಾರ ಸ್ವಾಮೀಜಿಯವರು ಶಿಕ್ಷಣ, ಧಾರ್ಮಿಕ ಕ್ಷೇತ್ರದ ಅಭಿವೃದ್ಧಿ ಬದಲಿಗೆ ಅನೇಕ ನಿಯಮಗಳ ಉಲ್ಲಂಘನೆ ಮಾಡಿರುವ ದಾಖಲೆ ಇವೆ. ಟ್ರಸ್ಟ್ ಸೂಪರ್ ಸೀಡ್ ಮಾಡುವ ಜೊತೆಗೆ ಸರ್ಕಾರ ಆಡಳಿತಾಧಿಕಾರಿಯನ್ನ ನೇಮಕ ಮಾಡಬೇಕು. ಹಣಕಾಸು ವ್ಯವಹಾರ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿಗಳ ಸಮ್ಮತಿಯಿಂದ ಸರ್ಕಾರದ ಅನುದಾನವನ್ನು ಜಾತ್ರೆಗೆ ಬಳಸಿಕೊಂಡಿ ದ್ದಾರೆ. ಶೇ. 7.5 ರಷ್ಟು ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್  ನಲ್ಲಿ ಹೋರಾಟ ಮಾಡಿರುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದರು.ಟ್ರಸ್ಟ್ ನಲ್ಲಿ ಅನ್ಯ ಜಾತಿಯವರನ್ನು ಸೇರ್ಪಡೆ ಮಾಡಿಕೊಂಡಿರುವುದು ಟ್ರಸ್ಟ್ ನಿಯಮ ಉಲ್ಲಂಘನೆ ಒಳಗೊಂಡಂತೆ ಹಲವಾರು ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಟ್ರಸ್ಟ್ ಸೂಪರ್ ಸೀಡ್ ಮಾಡಬೇಕು ಎಂದು ನ್ಯಾಯಾಲಯ ದಲ್ಲಿ ದಾವೆ ಹೂಡಲಾಗುವುದು ಎಂದು ತಿಳಿಸಿದರು.ಸುದ್ದಿಗೋಷ್ಠಿ‌ಯಲ್ಲಿಎಸ್.ಎಚ್. ಸುಭಾಷ್, ಪಿ. ರಾಧಾಕೃಷ್ಣ, ಪ್ರಶಾಂತ ರಾಮಪ್ಪ ದಳವಾಯಿ, ಆಂಜ ನೇಯ ದಳವಾಯಿ, ಮಾರಣ್ಣ ಪಾಳೇಗಾರ, ಟಿ.ಎನ್. ಮನೋಹರ್, ಟಿ.ಎಸ್. ಕರಿಯಪ್ಪ, ತಾಯಪ್ಪ ನಾಯಕ  ಉಪಸ್ಥಿತರಿದ್ದರು.