ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ನರಸಪ್ಪ ಭೂತೆರಗೆ ಕಲಾವಿದರ ಒಕ್ಕೂಟದಿಂದ ಸನ್ಮಾನ

ಬೀದರ್, ನ. 06ಃ ಕರ್ನಾಟಕ ರಾಜ್ಯೋತ್ಸವ ದಿನದಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಬೀದರ ಗಡಿ ಜಿಲ್ಲೆಯ ಭೂತೇರ ಕಲಾವಿದ ನರಸಪ್ಪ ಮಾಳೆಗಾಂವ ಅವರಿಗೆ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ನಗರದ ನಾವದಗೆರಿಯ ಹನುಮಾನ ಮಂದಿರದಲ್ಲಿ ಇಂದು ಶಾಲು ಹೊದಿಸಿ, ಹೂಮಾಲೆ ಹಾಕಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಭೂತೇರ ಕುಣಿತದ ಕಲಾವಿದರಾದ ನರಸಪ್ಪಾ ಮಾಳೆಗಾಂವ ಅವರು ಮಾತನಾಡುತ್ತ, ರಾಜ್ಯ ಸರ್ಕಾರ ನನ್ನಂತಹ ಬಡ ಕಲಾವಿದನಿಗೆ ಗುರುತಿಸಿ, ರಾಜ್ಯ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಮಫಲಕ, ಬಂಗಾರದ ಪದಕ ಹಾಗೂ 5 ಲಕ್ಷ ರೂ. ನಗದು ಬಹುಮಾನ ನೀಡಿ, ಗೌರವಿಸಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದಗಳು ಹೇಳಿದರು.
ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ ಅವರು, ರಾಜ್ಯ ಸರ್ಕಾರ ಬೀದರ ಗಡಿ ಜಿಲ್ಲೆಯಲ್ಲಿ ಕಳೆದ 40 ವರ್ಷಗಳಿಂದ ಭೂತೇರ ಕುಣಿತ ಕಲೆಯನ್ನು ಜೀವಂತ ಇಟ್ಟಿರುವ ಬಡ ಕಲಾವಿದ ನರಸಪ್ಪ ಮಾಳೆಗಾಂವ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ, ಗೌರವಿಸಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದಗಳು ಹೇಳಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಶ್ರೀಮಂತ ವ್ಯಕ್ತಿಗಳಿಗೆ ಬೀದರ ಜಿಲ್ಲಾ ನಾಗರಿಕ ಸಮಿತಿ ಸನ್ಮಾನ ಕಾರ್ಯಕ್ರಮ ಆಯೋಜಿಸುತ್ತದೆ. ಓರ್ವ ನಿಷ್ಠಾವಂತ ಬಡ ಕಲಾವಿದ ನರಸಪ್ಪ ಮಾಳೆಗಾಂವ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ, ಗೌರವಿಸಿದರೂ ಬೀದರ ಜಿಲ್ಲಾ ನಾಗರಿಕ ಸಮಿತಿ ಗೌರವ ಸನ್ಮಾನ ಮಾಡದಿರುವುದು ಶೋಚನೀಯವಾಗಿದೆ ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ ಅವರು ಮಾತನಾಡುತ್ತ, ಬೀದರ ಗಡಿ ಜಿಲ್ಲೆಯಲ್ಲಿ ನರಸಪ್ಪ ಮಾಳೆಗಾಂವ ಅವರು ಭೂತೇರ ಕುಣಿತ ಕಲೆಯನ್ನು ಜೀವಂತ ಇಡಲು ತಮ್ಮ ಶಿಷ್ಯದಿಂರ ಸಂಖ್ಯೆ ಹೆಚ್ಚಿಸಬೇಕು. ಇದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಶೀಸಿ ಹೋಗುತ್ತಿರುವ ಕಲೆ, ಸಾಹಿತ್ಯ, ಸಂಸ್ಕøತಿ ಉಳಿಸುವ ಬೆಳೆಸುವ ನಿಟ್ಟಿನಲ್ಲಿ ನರಸಪ್ಪ ಮಾಳೆಗಾಂವ ತಂಡ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ಬೀದರ ಜಿಲ್ಲೆಯ ಹಿರಿಯ ಸಾಹಿತಿ ರಮೇಶ ಬಿರಾದಾರ, ರಾಜಕುಮಾರ ಹೆಬ್ಬಾಳೆ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಯುವ ಸಂಘ-ಸಂಸ್ಥೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸುನೀಲ ಭಾವಿಕಟ್ಟಿ, ಪತ್ರಕರ್ತರಾದ ನಾಗಶೆಟ್ಟಿ ಧರಮಪೂರ, ಎಂ.ಪಿ. ಮುದಾಳೆ, ಹಾಜಿಪಾಶಾ ಬಾಳೂರ, ಯಾದವರಾವ ಘೋಡ್ಕೆ, ಸಂಜೀವಕುಮಾರ ಅತಿವಾಳೆ, ಪಂಢರಿ ನೇಳಗೆ, ರವಿ ನೇಳಗೆ, ಸಂಗ್ರಾಮ ಚಿಟ್ಟಾ, ಕಲಾವಿದರಾದ ಹಣಮಂತ ರಾಮಲು, ರೇಣುಕಾ ಅವರು ಸೇರಿದಂತೆ ನಾವದೇರಿಯ ಮಹಿಳೆಯರು, ಮಕ್ಕಳು, ಹಿರಿಯರು ಗಣ್ಯರು ಇದ್ದರು.