
ಸಂಜೆವಾಣಿ ವಾರ್ತೆ
ಬಳ್ಳಾರಿ, ಸೆ.17: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜ್ಞಾನಾಮೃತ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯದಲ್ಲಿ ಬೆಸ್ಟ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ವಿಜೇತರಾಗಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ. ರಾಮಪ್ಪ, ಉಪಾದ್ಯಕ್ಷರು ಶ್ರೀ ಕೆ. ತಿಲಕ್ ಕುಮಾರ್, ಕಾರ್ಯದರ್ಶಿ ಎಮ್. ಶ್ರೀನಿವಾಸುಲು ಪ್ರಾಚಾರ್ಯರು ಶ್ರೀ ಕೆ. ವೆಂಕಟೇಶ್ವರರಾವ್, ಉಪ ಪ್ರಾಚಾರ್ಯರು ಶ್ರೀ ಜಿ. ಶ್ರೀನಿವಾಸರೆಡ್ಡಿ , ದೈಹಿಕ ಶಿಕ್ಷಣ ಸಿಬ್ಬಂದಿಗಳಾದ ಶಿವಾನಂದ್, ತಿಪ್ಪೇರುದ್ರ, ಶ್ರೀಮತಿ ವೆಂಕಟಲಕ್ಷ್ಮಿ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.