ಕಲಬುರಗಿ,ಜು.27: ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ, ತತ್ವಜ್ಞಾನಿಯಾಗಿ, ಶಿಕ್ಷಣ ತಜ್ಞರಾಗಿ, ಕ್ಷಿಪಣಿಯ ರೂವಾರಿಯಾಗಿ, ಧೀಮಂತ ಧುರಿಣರಾಗಿ, ಯುವ ಜನತೆಯ ದಾರಿದೀಪವಾಗಿ ಅನೇಕ ಚಿಂತನೆಗಳನ್ನು ನೀಡಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರದು ಬಹುಮುಖ ಮೇರು ವ್ಯಕ್ತಿತ್ವ. ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಎಸ್.ಬಿ.ಕಾಲೇಜು ಎದುರುಗಡೆಯಿರುವ ‘ಕೊಹಿನೂರ ಕಂಪ್ಯೂಟರ ತರಬೇತಿ ಸಂಸ್ಥೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಏರ್ಪಡಿಸಿದ್ದ ‘ಡಾ.ಎ.ಪಿ.ಜೆ.ಅಬ್ದುಲ್ ಕಲಾಂರ ಪುಣ್ಯಸ್ಮರಣೋತ್ಸವ’ದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ಎಸ್.ಘತ್ತರಗಿ ಮಾತನಾಡಿ, ಕಲಾಂ ಅವರಂತಹ ಮೇರು ವ್ಯಕ್ತಿತ್ವ ಹೊಂದಿದವರು ವಿರಳ. ಅವರಲ್ಲಿರುವ ದೇಶದ ಅಭಿವೃದ್ಧಿಯ ತುಡಿತ ನಮ್ಮೆಲ್ಲರಿಗೆ ಸದಾ ಮಾದರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಶಿವಯೋಗಪ್ಪ ಬಿರಾದಾರ, ದೇವೇಂದ್ರಪ್ಪ ಗಣಮುಖಿ, ಅಶ್ವಿನಿ ಜೆ.ಪಾಟೀಲ, ಅರ್ಚನಾ ಎಂ.ಹೀರಾಪುರ, ವಿಜಯಲಕ್ಷ್ಮೀ ಪಾಟೀಲ, ರಮಿಶಾ ಶೇಖ್, ಪೂಜಾ ಡಿ.ಮುಲಗೆ, ವಿನಯ ರೆಡ್ಡಿ, ರಾಶಿ ಗುತ್ತೇದಾರ, ರಿತಿಕಾ ಗುತ್ತೇದಾರ ಸೇರಿದಂತೆ ಮತ್ತಿತರರಿದ್ದರು.