
ಯಾದಗಿರಿ : ನ.10: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯಾದಗಿರಿ ಜಿಲ್ಲಾ ವಕೀಲರ ಸಂಘ, ಮಹಿಳಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ 2023ರ ನವೆಂಬರ್ 9ರ ಗುರುವಾರ ರಂದು ಯಾದಗಿರಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಬಿ.ಜಯಂತ ಅವರು ಮಾತನಾಡಿದರು.
ದಿನನಿತ್ಯ ನಾವು ಕಾನೂನನ್ನು ಪಾಲಿಸಬೇಕು, ಕಾನೂನು ಅರಿವು ಮತ್ತು ಜ್ಞಾನದಿಂದ ನಾವು ಎಷ್ಟೋ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು, ಕಾಳಿದಾಸ ಮತ್ತು ಭೋಜರಾನ ಕಥೆಯ ಮೂಲಕ ಮಾರ್ಮಿಕವಾಗಿ ಬದುಕಿನ ಬಗ್ಗೆ ತಿಳಿಸಿದರು.
ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ರವೀಂದ್ರ ಎಲ್.ಹೊನೋಲೆ ಅವರು ಮಾತನಾಡಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆಯನ್ನು 9ನೇ ನವೆಂಬರ್ 1995 ರಂದು ಕರ್ನಾಟಕದಲ್ಲಿ ಜಾರಿಗೆ ತಂದಿತು. ಈ ಕಾಯ್ದೆಯ ಪ್ರಕಾರ ಸಮಾಜದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರು ಕಾನೂನು ನೆರವು ಮತ್ತು ಮಾರ್ಗದರ್ಶನವನ್ನು ಉಚಿತವಾಗಿ ಪಡೆಯಬಹುದು ಎಂದು ತಿಳಿಸಿದರು.
ಯಾದಗಿರಿ ಜಿಲ್ಲಾ ವಕೀಲರ ಸಂಘ ಅಧ್ಯಕ್ಷರು ಶ್ರೀ ಸಿ.ಎಸ್. ಮಾಲಿಪಾಟೀಲ್ ಅವರು ಮಾತನಾಡಿದರು, ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯು ಸಮಾನ್ಯ ನಾಗರಿಕರು ಕೂಡಾ ಸಂವಿಧಾನದ ನೀಡಿದ ತಮ್ಮ ಹಕ್ಕುಗಳನ್ನು ಮತ್ತು ಕರ್ತವ್ಯಗಳ ಬಗ್ಗೆ ಮಾಹಿತಿ ತಿಳಿದಿರಬೇಕು, ಪ್ರತಿಯೊಬ್ಬರು ಹಕ್ಕುಗಳು ಪಡೆಯಬೇಕು ಅದರಂತೆ ಕರ್ತವ್ಯಗಳನ್ನು ಕೂಡಾ ಪಾಲನೆ ಮಾಡಬೇಕು ಎಂದು ಹೇಳಿದರು.
ಯಾದಗಿರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಶ್ರೀ ಡಾ.ಸರ್ವೋದಯ ಎಸ್.ಎಸ್ ಅವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಸ್ಥಾನ ವಹಿಸಿದ ಮಾತನಾಡಿದರು. ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯಲ್ಲಿ ಎಲ್ಲರಿಗೂ ಕಾನೂನಿನ ಮೂಲಕ ದೊರೆಯಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಲು ಕಾನೂನು ಸೇವಾ ಪ್ರಾಧಿಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ವಕೀಲರು, ಶಿಕ್ಷಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.