
ಬ್ಯಾಡಗಿ,ಜು.2: ಸಾಲದ ಬಾಧೆಯಿಂದ ರೈತನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕಾಗಿನೆಲೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹೆಡಿಗ್ಗೊಂಡ ಗ್ರಾಮದಲ್ಲಿ ಶನಿವಾರ ಜರುಗಿದೆ.
ಮೃತ ರೈತನನ್ನು ಹೆಡಿಗ್ಗೊಂಡ ಗ್ರಾಮದ ಶಿವನಗೌಡ ಭೀಮನಗೌಡ ಹೊಸಮನಿ ಎನ್ನಲಾಗಿದ್ದು, ಕಳೆದ ಎರಡು ವರ್ಷದಿಂದ ಮಳೆ ಹೆಚ್ಚಾದ ಕಾರಣ ಯಾವುದೇ ಬೆಳೆ ಬಾರದೆ ಇರುವುದರಿಂದ ಸಂಕಷ್ಟಕ್ಕೆ ಒಳಗಾಗಿದ್ದರು. ಅಲ್ಲದೇ ಈ ವರ್ಷವೂ ಕೂಡ ಮಳೆ ಬಾರದೇ ಕಬ್ಬಿನ ಬೆಳೆಯು ಪೂರ್ತಿ ಒಣಗಿದ ಕಾರಣ ಸಾಲ ಹೇಗೆ ತೀರಿಸುವುದು ಎಂಬ ಚಿಂತೆಯಲ್ಲಿಯೇ ಜೀವನದ ಜುಲೈ 1ರಂದು ಸಂಜೆ 6ಗಂಟೆಗೆ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೆÇಲೀಸ್ ವರದಿಯಲ್ಲಿ ತಿಳಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕಾಗಿನೆಲೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.