ರೌಡಿ ಶೀಟರ್‍ಗಳ ಮನೆಗಳ ಮೇಲೆ ದಾಳಿ

ಮೈಸೂರು: ಮೇ.08:- ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ಪೆÇಲೀಸರು ಶಾಂತಿಯುತ ಮತದಾನಕ್ಕಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆಗೆ ಹೆಜ್ಜೆ ಇಟ್ಟಿದ್ದಾರೆ. ಈಗಾಗಲೇ ಹಲವು ರೌಡಿ ಶೀಟರ್ ಗಳನ್ಮ ಗಡೀಪಾರು ಮಾಡುವ ಮೂಲಕ ಕಿಡಿಗೇಡಿಗಳಿಗೆ ವಾರ್ನಿಂಗ್ ಕೊಟ್ಟಿರುವ ಪೆÇಲೀಸರು ಮತ್ತಷ್ಟು ಬಿಗಿ ಮಾಡುತ್ತಿದ್ದಾರೆ.
ಮೈಸೂರು ನಗರದ ವಿವಿದ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳಿಗೆ ಎಚ್ಚರಿಕೆ ಗಂಟೆಯ ಸಂದೇಶರವಾನಿಸಿದ್ದಾರೆ.
ರೌಡಿ ಶೀಟರ್ ಗಳ ಮನೆಗಳ ಮೇಲೆ ಧಿಢೀರ್ ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದಾರೆ. ನಗರ ಪೆÇಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಸಮಾಜದಲ್ಲಿ ಶಾಂತಿ ಭಂಗ ಉಂಟುಮಾಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ. ಸಮಾಜಘಾತುಕ ಶಕ್ತಿಗಳಿಗೂ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಶಾಂತಿಭಂಗ ಉಂಟುಮಾಡಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.