(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.30: ನಗರದಲ್ಲಿಂದು ವಾಸವಿ ಜಯಂತಿಯನ್ನು ಆರ್ಯ ವೈಶ್ಯ ಅಸೋಸಿಯೇಷನ್ ವತಿಯಿಂದ ಆಚರಿಸಲಾಯ್ತು.
ಕನ್ಯಕಾ ಪರಮೇಶ್ವರಿ ದೇವಸ್ಥಾನದಿಂದ ವಾಸವಿ ಭಾವಚಿತ್ರದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ನಡೆಯಿತು.
ಆರ್ಯ ವೈಶ್ಯ ಸಮಾಜದ ಮುಖಂಡರಾದ ಡಾ.ಡಿ.ಎಲ್.ರಮೇಶ್ ಗೋಪಾಲ್, ಸೊಂತ ಗಿರಿಧರ್ ಮೊದಲಾದವರು ಇದ್ದರು.