ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲರು


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜು. 13:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್‌ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯವನ್ನು ಉದ್ಘಾಟಿಸಿದರು, ಇದಕ್ಕೂ ಮುನ್ನ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿದರು.  ಬಳಿಕ ವಿವಿ ಆವರಣದಲ್ಲಿ ಸಂಪಿಗೆ ಗಿಡಗಳನ್ನು ನೆಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ನವದೆಹಲಿ ಅಧ್ಯಕ್ಷ ಡಾ. ಜೆ. ಕೆ.,  ಬಜಾಜ್, ಕುಲಪತಿ ಪ್ರೋ ಸಿದ್ದು ಪಿ ಆಲಗೂರು, ಮೇಯರ್ ತ್ರಿವೇಣಿ,  ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಪಂ ಸಿಇಒ ರಾಹುಲ್ ಸಂಕನೂರ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.