ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಪ್ರತಿಭಟನೆ

ಬಂಗಾರಪೇಟೆ, ಆ. 13:ಕಾಣೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವರನ್ನು ಹುಡುಕಿಕೊಟ್ಟು, ಲೋಡ್ ಶೆಡ್ಡಿಂಗ್ ಹೆಸರಿನಲ್ಲಿ ಸಮರ್ಪಕ ವಿದ್ಯುತ್ ನೀಡದೆ ರೈತರು ಹಾಗೂ ಜನ ಸಾಮಾನ್ಯರ ಜೀವನದ ಜೊತೆ ಚಲ್ಲಾಟವಾಡುತ್ತಿರುವ ಬೆಸ್ಕಂ ಅಧಿಕಾರಿಗಳು ರೈತ ವಿರೋಧಿ ದೋರಣೆ ಖಂಡಿಸಿ ಆ-೧೭ ರಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಕಛೇರಿ ಮುಂದೆ ನಷ್ಟೆ ಬೆಳೆ ಸಮೇತ ಹೋರಾಟಮಾಡಲು ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಅಧಿಕಾರಕ್ಕೆ ಬರುವ ಸರ್ಕಾರಗಳು ಬಜೆಟ್‌ನಲ್ಲಿ ನಿರ್ಲಕ್ಷ ಮಾಡುವಂತೆ ಉಸ್ತುವಾರಿ ಸಚಿವರನ್ನು ಜಿಲ್ಲೆಯ ನಾಡಿ ಮಿಡಿತವಿಲ್ಲದ ಜನರ ಸಂರ್ಪಕಕ್ಕೆ ಸಿಗದೆ ಬೆಂಗಳೂರು ಕಛೇರಿಗೆ ಹೊಂದಿಕೊಳ್ಳುವ ಉಸ್ತುವಾರಿಗಳನ್ನು ನೇಮಕ ಮಾಡಿಕೊಳ್ಳುವ ಮೂಲಕ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡುತ್ತಿದ್ದಾರೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರಿದ್ದರು ಸರ್ಕಾರದ ಮೇಲೆ ಒತ್ತಡ ಹಾಕಿ ಸ್ಥಳೀಯರಿಗೆ ಉಸ್ತುವಾರಿ ಸಚಿವರ ನೇಮಕ ಮಾಡಿಕೊಳ್ಳುವಲ್ಲಿ ವಿಫಲವಾಗುವ ಜೊತೆಗೆ ಪ್ರುಸ್ತುತ ಇರುವ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯ ರೈತರ ಬಡ ಕೂಲಿ ಕಾರ್ಮಿಕರ, ದಲಿತರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಳ್ಳುವಲ್ಲಿ ಸಂಪೂರ್ಣವಾಗಿ ವಿಪಲವಾಗಿದ್ದಾರೆ. ಜೊತೆಗೆ ಟೆಮೊಟೋಗೆ ಬಾದಿಸುತ್ತಿರುವ ರೋಗಗಳು ನಾಪತ್ತೆಯಾಗಿರುವ ಕೃಷಿ ತೋಟಗಾರಿಕೆ ಅಧಿಕಾರಿಗಳು ಹಾಗೂ ನಕಲಿ ಬಿತ್ತನೆ ಬೀಜ ಕೀಟನಾಶಕಗಳ ನಿಯಂತ್ರಣವಿಲ್ಲದೆ, ರೈತರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆಯುತ್ತಿರುವ ಬೆಳೆ ನಾಶವಾಗುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರೈತರ ಸಭೆ ಕರೆದು ಸಮಸ್ಯೆ ಬಗೆ ಹರಿಸುವಲ್ಲಿ ವಿಫಲವಾಗಿದ್ದಾರೆಂದು ಆರೋಪ ಮಾಡಿದರು.
ಸಭೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷ ಎ.ನಳಿನಿಗೌಡ, ಶೈಲಜ, ವೆಂಕಟಮ್ಮ, ರಾಮಕ್ಕ, ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಹ.ಸೇ.ಜಿಲ್ಲಾಧ್ಯಕ್ಷ ಕಿರಣ್, ಜಿಲ್ಲಾ ಉಪಾಧ್ಯಕ್ಷ ಚಾಂದ್‌ಪಾಷ, ಮಂಗಸಂದ್ರ ತಿಮ್ಮಣ್ಣ, ಲಕ್ಷ್ಮಣ್, ಸುರೇಶ್‌ಬಾಬು ರಾಮಸಾಗರ ವೇಣು, ಸುಪ್ರಿಂ ಚಲ, ಮಾಲೂರು ತಾ.ಅಧ್ಯಕ್ಷ ಯಲ್ಲಣ್ಣ, ಹರೀಶ್, ಗಿರೀಶ್, ಜಾವೀದ್, ಆರೀಪ್, ಮಹ್ಮದ್ ಶೋಹೀಬ್, ಬಾಬಾಜಾನ್ ಮುಂತಾದವರು ಇದ್ದರು.