
ಜಗಳೂರು.ಏ.೧೫ :- ಜಾತ್ಯಾತೀತ ರಾಷ್ಟವಾದ ಭಾರತಕ್ಕೆ ವಿಶ್ವಕ್ಕೆ ಮಾದರಿಯಾಗುವಂತ ಸಂವಿಧಾನವನ್ನು ರಚಿಸಿದ ಕೀರ್ತಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆಯ ಅಂಗವಾಗಿ ದಲಿತ ಸಂಘರ್ಷ ಸಮಿತಿ ಯ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿದ ನಂತರ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ದಿoದಲೇ ಸರ್ವರಿಗೂ ಸಮಪಾಲು, ಸಮಬಾಳು ತತ್ವದಡಿ ಸೌಭ್ಯ ಗಳು ದೊರೆಯುವಂತಾಗಿದೆ. ಅಂಬೇಡ್ಕರ್ರವರ ತತ್ವಾದರ್ಶ ಗಳನ್ನು ನಾವೆಲ್ಲರು ಅಳಡಿಸಿ ಕೊಳ್ಳಬೇಕಾಗಿದೆ ಎಂದರು.ಪ್ರಾಂಶುಪಾಲರಾದ ನಾಗಲಿಂಗಪ್ಪ ಮಾತನಾಡಿ ಎಲ್ಲರ ಒಳಿತಿಗಾಗಿ ಇದೆ ಸಂವಿಧಾನದಿಂದ ಮಾತ್ರ ಈ ಈ ದೇಶು ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ ಆದ್ದರಿಂದ ಅಂಬೇಡ್ಕರ್ ಅವರ ಬರೆದಿರುವಂತಹ ಸಂವಿಧಾನವನ್ನು ಅಧ್ಯಯನ ಮಾಡುವುದು ಅವಶ್ಯ ಎಂದು ಹೇಳಿದರು.ಭಾರತದ ಕಾನೂನು ಅಸ್ಪೃಶ್ಯತೆ ನಿವಾರಣೆಯಾಗ ಬೇಕು.ಜನಸಾಮಾನ್ಯರಿಗೆ ಮೂಲಭೂತ ಕರ್ತವ್ಯ ಸಮಾನತೆ ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಅವರು ನೀಡಿದ ಕೊಡುಗೆಯನ್ನು ಸ್ಮರಿಸಲು ಪ್ರತಿ ವರ್ಷವೂ ಅಂಬೇಡ್ಕರ್ ಜಯಂತಿ ಯನ್ನು ಶಾಲಾ-ಕಾಲೇಜುಗಳು ಸರ್ಕಾರಿ ಖಾಸಗಿ ಕಚೇರಿಗಳಲ್ಲಿ ಆಚರಣೆ ಮಾಡಲಾಗುತ್ತದೆ ಎಂದರು.