ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಪ್ರವೀಣಕುಮಾರ

???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಭಾಲ್ಕಿ:ಜು.21: ವ್ಯಸನಮುಕ್ತ ಸುಮಾಜ ನಿರ್ಮಾಣಕ್ಕೆ ಸರ್ವರೂ ಕೈಜೋಡಿಸಿಬೇಕು, ಅಂದಾಗ ಮಾತ್ರ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿದೇರ್ಶಕ ಪ್ರವೀಣಕುಮಾರ ಅಭಿಪ್ರಾಯಪಟ್ಟರು.
ಪಟ್ಟಣದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಕಾರ್ಯಾಲಯದಲ್ಲಿ ಗುರುವಾರ ನಡೆದ ಮಧ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಚಟುವಟಿಕೆಗಳು ಭಾಲ್ಕಿ ತಾಲೂಕಿನಲ್ಲಿ 2016 ರಿಂದ ಪ್ರಾರಂಭವಾಗಿವೆ. ಧರ್ಮಸ್ಥಳದ ಪೂಜ್ಯರಾದ ಶ್ರೀ ವೀರೇಂದ್ರ ಹಗಡೆಯವರ ನೇತೃತ್ವದಲ್ಲಿ 1982 ರಲ್ಲಿ ಈ ಯೋಜನೆ ಪ್ರಾರಂಭಿಸಲಾಯಿತು. ಪ್ರಾರಂಭದಲ್ಲಿ ರೈತರ ಜೀವನಾಡಿಯಾಗಿ ಕಾರ್ಯ ನಿರ್ವಹಿಸುತ್ತಾ ಬಂದಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು, ಅಭಿವೃದ್ಧಿ ಸೋರಿಕೆಯ ಮೂಲ ಕಂಡು ಹಿಡಿಯುವ ನಿಟ್ಟಿನಲ್ಲಿ ಮಹಿಳಾ ಸ್ವಸಹಾಯ ಸಂಘಟನೆಗಳನ್ನು ಕಟ್ಟುವ ಮೂಲಕ ಕಾರ್ಯನಿರ್ವಹಿಸುತ್ತಾ ಬರುತ್ತಲಿದೆ. ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮನೆಯ ಮಹಿಳೆಯರಲ್ಲಿ ಅರಿವು ಮೂಡಿಸುವುದರೊಂದಿಗೆ, ಜನ ಜಾಗೃತಿ ಮೂಲಕ ಸಾರ್ವಜನಕಿರಲ್ಲಿಯ ದುಶ್ಚಟಗಳನ್ನು ಬಿಡಿಸುವ ಕಾರ್ಯ ಮಾಡುತ್ತಾ ಬಂದಿದೆ. ಸದ್ಯದಲ್ಲಿ ಮಧ್ಯವರ್ಜನ ಶಿಬಿರಗಳನ್ನು ಏರ್ಪಡಿಸಿ ದುಶ್ವಚಟಗಳ ದಾಸರಾದವರನ್ನು ಗುರಿಯಾಗಿಸಿಕೊಂಡು ಅವರನ್ನು ಸುಧಾರಿಸುವ ಕಾರ್ಯಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಮೊದಲ ಶಿಬಿರ ಭಾಲ್ಕಿ ತಾಲೂಕಿನಿಂದಲೇ ಪ್ರಾರಂಭಿಸುವ ಕಾರ್ಯವಾಗಬೇಕು ಎಂದು ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕೆ ಸ್ಥಳೀಯ ಪ್ರಮುಖರ ಸಹಕಾರ ಅಗತ್ಯ ಎಂದು ತಿಳಿಸಿದರು.
ಸ್ಥಳೀಯ ಪ್ರಮುಖರಾದ ಕಸಾಪ ತಾಲೂಕು ಅಧ್ಯಕ್ಷ ನಾಗಭೂಷಣ ಮಾಮಡಿ, ವಿಶ್ವ ಹಿಂದೂ ಪರಿಷತ್ ಪ್ರಮುಖ ಶಿವು ಲೋಖಂಡೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜೆಪ್ಪ ಪಾಟೀಲ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಜಯರಾಜ ದಾಬಶೆಟ್ಟಿ, ಕಾರ್ಯದರ್ಶಿ ಗಣಪತಿ ಬೋಚರೆ, ಖಜಾಂಚಿ ಸಂತೋಷ ಬಿಜಿಪಾಟೀಲ ರವರು ಮಾತನಾಡಿ, ಸ್ಥಳೀಯ ನಾಯಕರನ್ನೊಳಗೊಂಡಂತೆ ಒಂದು ಸಮಿತಿಯನ್ನು ರಚಿಸಿ ಮಧ್ಯವಜ್ರ್ಯನ ಶಿಬಿರ ಉತ್ತಮ ರೀತಿಯಿಂದ ಆಯೋಜಿಸುವ ಕುರಿತು ಮಾಹಿತಿ ನೀಡಿದರು. ಅಲ್ಲದೆ ಕೆಲವೇ ಸಮಯದಲ್ಲಿ ಇನ್ನೊಂದು ಸಭೆಯನ್ನು ಕರೆದು ಸ್ಥಳೀಯ ನಾಯಕರನ್ನೊಳಗೊಂಡ ಉತ್ತಮ ಸಮಿತಿ ರಚಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಪ್ರಮುಖರಾದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಭ್ರಮಣ್ಯ ಯಮಗಾರ, ಶಿವಾನಂದ ಲಕಾಟಿ, ಚಂದ್ರಕಾಂತ ನೇಳಗೆ, ಲೋಕೇಶ, ಶೃತಿ ಬಿಜಿಪಾಟೀಲ ಸೇರಿದಂತೆ ಗ್ರಾಮಾಭಿವೃದ್ಧಿ ಯೋಜನಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.ಶಿವಾನಂದ ಸ್ವಾಗತಿಸಿದರು. ಸುಭ್ರಮಣ್ಯ ನಿರೂಪಿಸಿದರು. ಶೃತಿ ವಂದಿಸಿದರು.