
ಅಥಣಿ :ಎ.3: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಚುನಾವಣೆ ಆಯೋಗದ ಪ್ರತಿ ತಾಲೂಕಿನ ಶರಹದ್ದಿನಲ್ಲಿ ಚೆಕ್ ಪೆÇೀಸ್ಟ್ ನಿರ್ಮಿಸಿ ಪ್ರತಿಯೊಂದು ವಾಹನ ಹಾಗೂ ವ್ಯಕ್ತಿಗಳ ಮೇಲೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಈ ಕಟ್ಟುನಿಟ್ಟಿನ ಆದೇಶವನ್ನು ರಾಜ್ಯಾದ್ಯಂತ ಅಧಿಕಾರಿಗಳು ಪಾಲನೆ ಮಾಡುತ್ತಿದ್ದಾರೆ, ಆದರೆ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಪುತ್ರನ ಕಾರನ್ನು ಚೆಕ್ ಪೆÇೀಸ್ಟ್ ಅಧಿಕಾರಿಗಳು ಪರಿಶೀಲನೆ ಮಾಡದೆ ಹಾಗೇ ಬಿಟ್ಟು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಹಿರಿಯ ಅಧಿಕಾರಿ ಓರ್ವರು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಹರವಲಯದ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ಸಂಪರ್ಕ ಕಲಪಿಸುವ ಮಾರ್ಗ ಮಧ್ಯದಲ್ಲಿ ಚೆಕ್ ಪೆÇೀಸ್ಟ್ ನಿರ್ಮಾಣ ಮಾಡಿದ್ದು, ಇಲ್ಲಿ ಪ್ರತಿಯೊಂದು ವಾಹನಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಆದರೆ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಅವರ ಪುತ್ರ ಶ್ರೀನಿವಾಸ ಪಾಟೀಲ್ ಆಗಮಿಸುತ್ತಿದ್ದಂತೆ ಅಧಿಕಾರಿಗಳು ಅವರ ಕಾರನ್ನು ಪರಿಶೀಲನೆ ಮಾಡದೆ ಹಾಗೆ ಬಿಟ್ಟಿದ್ದರಿಂದ ಕೆಲವು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೇಲಾಧಿಕಾರಿಗಳಿಗೆ ಮೌಖಿಕವಾಗಿ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಾಗವಾಡ ತಹಶೀಲ್ದಾರ್ ಎಂ ಎನ್ ಬಳಿಗಾರ ಆಗಮಿಸಿ ಕರ್ತವ್ಯಲಿದ್ದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು,
ಕಾಗವಾಡ ಶಾಸಕರ ಮನೆ ಮಹಾರಾಷ್ಟ್ರದ ಸಾಂಗಲಿ ನಗರದಲ್ಲಿ ಇರುವುದರಿಂದ ಕಾಗವಾಡದಿಂದ ಸಾಂಗಲಿ ದಿನನಿತ್ಯ ಅವರು ಸಂಚಾರ ಬೆಳೆಸುವುದರಿಂದ ಅಧಿಕಾರಿಗಳು ಅವರ ಕಾರು ತಪಾಸನೆಗೆ ಮುಂದೆ ಹೋಗದೆ ಇರೋದ್ರಿಂದ ಕೆಲವು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿತ್ತು, ಕಾನೂನು ಎಲ್ಲರಿಗೂ ಸಮನಾಗಿದೆ ಇಲ್ಲಿ ರಾಜಕೀಯ ಮಕ್ಕಳಿಗೆ ಬೇರೆ ಕಾನೂನು ಇಲ್ಲ ಎಂದು ಹಿರಿಯ ಅಧಿಕಾರಿಗಳನ್ನು ಕೆಲವು ಸ್ಥಳೀಯರು ತರಾಟೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಕಾಗವಾಡ ತಹಶೀಲ್ದಾರ ಎಂ, ಎನ್, ಬಳಿಗಾರ ತಕ್ಷಣವೇ ಕಾರ್ಯಪ್ರವೃದ್ಧರಾಗಿ ಸ್ಥಳಕ್ಕೆ ದೌಡಾಯಿಸಿ ಚೆಕ್ ಪೆÇೀಸ್ಟ್ ನಲ್ಲಿ ಕರ್ತವ್ಯ ದಲ್ಲಿರುವ ಅಧಿಕಾರಿಗಳಿಗೆ ಯಾಕೆ ಶಾಸಕರ ಪುತ್ರನ ವಾಹನ ತಪಾಸಣೆ ಮಾಡ್ಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ, ನಿಮಗೆ ನೋಟಿಸ್ ನೀಡಲಾಗುವುದೆಂದು ಎಚ್ಚರಿಕೆ ಕೂಡ ನೀಡಿದ್ದಾರೆ ಪ್ರತಿಯೊಂದು ವಾಹನ ತಪಾಸನೆ ಮಾಡುವಂತೆ ನಿಮಗೆ ಈಗಾಗಲೇ ಹೇಳಿದ್ದೇನೆ ಆದರೂ ನೀವು ಕರ್ತವ್ಯ ಲೋಪ ಮಾಡಿದ್ದೀರಿ ಎಂದು ಆಕ್ರೋಶ ಹೊರ ಹಾಕಿದ್ದಲ್ಲದೆ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದ್ದಾರೆ.