ದಾವಣಗೆರೆ. ಜೂ.೧೦; ಯೋಗ, ಪ್ರಾಣಾಯಾಮ, ಧ್ಯಾನ ಮಾಡುವುದರಿಂದ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಬಹುದು ಎಂದು ಎಸ್.ಎಸ್ ಕೇರ್ ಟ್ರಸ್ಟ್ ಅಧ್ಯಕ್ಷರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಇತ್ತೀಚಿನ ಒತ್ತಡದ ಜೀವನ ಮತ್ತು ಆರೋಗ್ಯ ವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.ಎಆರ್ಜಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಆರ್ಜಿ – ವೈಭವ 2023 ರ ಎರಡನೇ ದಿನದ “ಆರೋಗ್ಯ ಪರಂಪರೆಯ ಆಹಾರ ಮೇಳ” ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಕುಟುಂಬ ಹಾಗೂ ಸಾಮಾಜಿಕ ಜವಾಬ್ದಾರಿಗಳ ಕಡೆ ಹೆಚ್ಚು ಗಮನಹರಿಸಲು ತಿಳಿಸಿದರು, ಕುಟುಂಬ ಮತ್ತು ಪ್ರಕೃತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವ ಅಭ್ಯಾಸ ಬೆಳೆಸಿಕೊಳ್ಳಲು ತಿಳಿಸಿದ ಅವರು ಶಿಕ್ಷಕರಿಗೆ ಗೌರವಿಸಬೇಕು ಹಾಗೂ ಪೋಷಕರನ್ನು ಪ್ರೀತಿಸಬೇಕು ಎಂದು ಸಲಹೆ ನೀಡಿದರು.ಅತಿಥಿಗಳಾಗಿ ಭಾಗವಹಿಸಿದ್ದ ಬಾಪೂಜಿ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದಎಂ.ಜಿ ಈಶ್ವರಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ಆರೋಗ್ಯ ಪದ್ಧತಿ ಹಾಗೂ ಜೀವನ ಪದ್ಧತಿಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.ಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಜಿಬಿ ಬೋರಯ್ಯ ವಹಿಸಿಕೊಂಡಿದ್ದರು ಸಭೆಯಲ್ಲಿ ಪದವಿ ಪೂರ್ವ ಪ್ರಾಂಶುಪಾಲರಾದ ಬೊಮ್ಮಣ್ಣ ಸೇರಿದಂತೆ ಶಿಕ್ಷಕರಿಂದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.