
- ಸಂಜೆವಾಣಿ ವಾರ್ತೆಶಿವಮೊಗ್ಗ, ಅ. 13: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ನಂತರ, ಪಟಾಕಿ ಅಂಗಡಿ – ಗೋದಾಮುಗಳಲ್ಲಿ ಸುರಕ್ಷತಾ ನಿಯಮಪಾಲನೆಯಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಜರುಗಿಸುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.ಇದರ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯು ಜಿಲ್ಲೆಯ ಪಟಾಕಿ ಮಾರಾಟ ಮಳಿಗೆ ಹಾಗೂ ಗೋದಾಮುಗಳ ಮೇಲೆ ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿದ ಘಟನೆ ಅ. 11 ರಂದು ನಡೆದಿದೆ. ಈ ವೇಳೆ ನಿಯಮ ಉಲ್ಲಂಘಿಸಿಪಟಾಕಿಮಾರಾಟ ಮಾಡುತ್ತಿದ್ದ ಹಾಗೂ ದಾಸ್ತಾನು ಮಾಡುತ್ತಿದ್ದವರ ಮೇಲೆ ಪ್ರಕರಣದಾಖಲಿಸಿದಘಟನೆವರದಿಯಾಗಿದೆ.ಪೊಲೀಸ್,ಕಂದಾಯ,ಲೋಕೋಪಯೋಗಿ,ಅಗ್ನಿಶಾಮಕದಳ,ಮೆಸ್ಕಾಂ,ಮಹಾನಗರಪಾಲಿಕೆ, ನಗರಸಭೆ, ತಾಲೂಕು ಪಂಚಾಯ್ತಿಗಳಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡಗಳು ಈ ದಾಳಿ ನಡೆಸಿವೆ.ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾರಕ್ಷಣಾಧಿಕಾರಿಜಿ.ಕೆ.ಮಿಥುನ್ ಕುಮಾರ್ ಸೂಚನೆ ಮೇರೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿನ ಪಟಾಕಿ ಮಾರಾಟ ಮಳಿಗೆ – ಗೋದಾಮುಗಳಲ್ಲಿ ತಪಾಸಣೆ ನಡೆಸಲಾಗಿದೆ.ಶಿವಮೊಗ್ಗಉಪವಿಭಾಗದಲ್ಲಿ 6, ಭದ್ರಾವತಿ 21, ಸಾಗರದಲ್ಲಿ 9, ಶಿಕಾರಿಪುರದಲ್ಲಿ 20, ತೀರ್ಥಹಳ್ಳಿ ಉಪ ವಿಭಾಗದಲ್ಲಿ 7 ಸೇರಿದಂತೆ ಒಟ್ಟು 63 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ.ಈವೇಳೆ ಮಳಿಗೆ ಹಾಗೂ ಗೋದಾಮುಗಳಲ್ಲಿ ಸುರಕ್ಷತಾ ನಿಯಮಗಳ ಪಾಲನೆ ಮಾಡಲಾಗುತ್ತಿದೆಯೇ? ಸಕ್ಷಮ ಪ್ರಾಧಿಕಾರದಅನುಮತಿಪಡೆಯಲಾಗಿದೆಯೇ?ಎಂಬುವುದನ್ನುಪರಿಶೀಲನೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿ ಪಟಕಿಗಳನ್ನ ಸಂಗ್ರಹಿಸಿಟ್ಟಿದ್ದ ಮತ್ತು ಮಾರಾಟ ಮಾಡುತ್ತಿದ್ದ ಮಳಿಗೆ / ಗೋದಾಮಿನ ಮಾಲೀಕರವಿರುದ್ದ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ 1, ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 1, ವಿನೋಬನಗರ ಪೊಲೀಸ್ ಠಾಣೆಯಲ್ಲಿ 1 ಮತ್ತು ಕೋಟೆ ಪೊಲೀಸ್ ಠಾಣೆಯಲ್ಲಿ 1 ಪ್ರರಕಣ ಸೇರಿದಂತೆ ಒಟ್ಟು 4 ಪ್ರಕರಣಗಳನ್ನು ದಾಖಲಿಸಲಾಗಿದೆ.ಅಂದಾಜು 2,000 ಕೆ.ಜಿ ತೂಕದ ಪಟಾಕಿಗಳನ್ನು ವಶಕ್ಕೆ ಪಡೆದಿದೆ.