
ಧಾರವಾಡ, ಆ.2: ಮಹಾನಗರ ಸೇರಿದಂತೆ ಜಿಲ್ಲೆಯಲ್ಲಿ ಸಂಘಟಿತ ಅಪರಾಧ ಕೃತ್ಯಗಳನ್ನು ತಡೆಗಟ್ಟಿ ಇದರಲ್ಲಿ ಭಾಗವಹಿಸುವ ಮತ್ತು ಪ್ರೇರೆಪಿಸುವ ದುಷ್ಟ ವ್ಯಕ್ತಿ, ಶಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಆಯೋಜಿಸದ್ದ ಪೊಲೀಸ್, ಅಬಕಾರಿ, ರಾಷ್ಟ್ರೀಯ ಹೆದ್ದಾರಿ, ಲೋಕೋಪೋಯೋಗಿ ಇಲಾಖೆ ಅಧಿಕಾರಿಗಳ ಸಭೆ ಜರುಗಿಸಿ, ಪ್ರಗತಿ ಪರಿಶೀಲನೆ ಮಾಡಿ, ಮಾತನಾಡಿದರು.
ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಸಂಘಟಿತ ಅಪರಾಧಗಳ ನಿಯಂತ್ರಣಕ್ಕೆ ಸಮನ್ವಯತೆಯಿಂದ ಕೆಲಸ ಮಾಡಬೇಕು. ಪ್ರತಿ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಜನ ಸ್ನೇಹಿಯಾಗಿ ವರ್ತಿಸಬೇಕು ಎಂದು ಹೇಳಿದರು.
ಯುವ ಸಮೂಹವನ್ನು ಗುರಿಯಾಗಿಸಿಕೊಂಡು ಮಾಧಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಪೊಲೀಸ್ ಇಲಾಖೆ ಗಮನ ಹರಿಸಿ ಇಂತಹ ಕೃತ್ಯಗಳಲ್ಲಿ ಭಾಗವಹಿಸುವವರನ್ನು ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಮಾಧಕ ವಸ್ತುಗಳ ಬಳಕೆಯಿಂದ ಆಗುವ ಹಾನಿ ಹಾಗೂ ಅಪರಾಧ ಕೃತ್ಯದ ಕುರಿತು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ತಿಳಿಸಿದರು.
ಅವಳಿ ನಗರದಲ್ಲಿ ನೂರಾರಕ್ಕೂ ಹೆಚ್ಚು ಕಾಲೇಜುಗಳಿವೆ. ಇಂಜಿನಿಯರಿಂಗ್, ಡೆಂಟಲ್, ವೈದ್ಯಕೀಯ, ಕಾಲೇಜುಗಳ ಸುತ್ತಮುತ್ತ ಹಾಗೂ ಹಾಸ್ಟೆಲ್ಗಳಲ್ಲಿ ಮಫ್ತಿಯಲ್ಲಿ ಹಾಗೂ ಅನಿರೀಕ್ಷಿತ ಬೇಟಿ ಕೈಗೊಂಡು ಅಪರಾಧ ಕೃತ್ಯಗಳ ಬಗ್ಗೆ ತೀವ್ರನಿಗಾ ವಹಿಸಬೇಕು. ಯುವ ಪೀಳಿಗೆ ದಾರಿ ತಪ್ಪದಂತೆ ಪೆÇಲೀಸ್ ಇಲಾಖೆ ಪ್ರಬಲ ಅಸ್ತ್ರವಾಗಬೇಕೆಂದರು. ಇಂದಿನ ಈ ಸಭೆಯು ಸಲಹಾತ್ಮಕ ಮಾರ್ಗದರ್ಶಿ ಸಭೆಯಾಗಿದ್ದು, ಮುಂಬರುವ ದಿನಗಳಲ್ಲಿ ಪೆÇಲೀಸ್ ಇಲಾಖೆಯ ಅಧಿಕಾರಿಗಳು ಡ್ರಗ್ಸ್, ಸಂಘಟಿತ ಅಪರಾಧ ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರತ್ಯಕ ಸಭೆ ಜರುಗಿಸುವುದಾಗಿ ಸಚಿವರು ತಿಳಿಸಿದರು.
ಅಬಕಾರಿ ಇಲಾಖೆ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು. ಮಕ್ಕಳು ಮಧ್ಯ ಮಾರಾಟ ಹಾಗೂ ಸೇವನೆ ಮಾಡದಂತೆ ಎಚ್ಚರಿಕೆ ವಹಿಸಬೇಕು. ಮಧ್ಯ ಮಾರಾಟ ಲೈಸನ್ಸ್ದಾರರು ಕಾನೂನು ಬಾಹಿರವಾಗಿ ಮಧ್ಯ ಮಾರಾಟ ಮಾಡುವುದು ಬೇಡ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಬಕಾರಿ ಅಧಿಕಾರಿಗಳು ತಕ್ಷಣ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಲೈಸನ್ಸ್ ರದ್ದು ಪಡಿಸಲು ಕ್ರಮ ವಹಿಸಬೇಕೆಂದು ಸಚಿವರು ಸೂಚಿಸಿದರು.